Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಇತ್ತೀಚೆಗೆ ರಸ್ತೆ ಅಪಘಾತಕ್ಕೀಡಾಗಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ರನ್ನು ಮುಂಬೈಗೆ ಏರ್ ಲಿಫ್ಟ್ ಮಾಡಲಾಗಿದೆ.
ಅಪಘಾತದಲ್ಲಿ ರಿಷಬ್ ಮಂಡಿರಜ್ಜು, ಹಣೆಗೆ ಗಾಯವಾಗಿತ್ತು. ಕಾಲು ಮುರಿತಕ್ಕೊಳಗಾಗಿರುವುದರಿಂದ ರಿಷಬ್ ಗೆ ಹೆಚ್ಚಿನ ಚಿಕಿತ್ಸೆ ನೀಡಲು ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅವರ ಚಿಕಿತ್ಸೆಯ ಸಂಪೂರ್ಣ ಹೊಣೆಯನ್ನು ಬಿಸಿಸಿಐ ವಹಿಸಿಕೊಂಡಿದೆ. ಬಿಸಿಸಿಐ ವೈದ್ಯಕೀಯ ತಂಡವೂ ರಿಷಬ್ ಮೇಲೆ ನಿಗಾ ಇಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.