Webdunia - Bharat's app for daily news and videos

Install App

ಮೊಹಮ್ಮದ್ ಸಿರಾಜ್ ಗೆ ಮೈದಾನದಲ್ಲೇ ಕ್ಷಮೆ ಕೇಳಿದ ರಿಷಬ್ ಪಂತ್: ಅಂತಹದ್ದೇನಾಯ್ತು

Krishnaveni K
ಶುಕ್ರವಾರ, 20 ಸೆಪ್ಟಂಬರ್ 2024 (11:58 IST)
ಚೆನ್ನೈ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನವಾದ
ಇಂದು ಭಾರತೀಯ ಬೌಲರ್ ಮೊಹಮ್ಮದ್ ಸಿರಾಜ್ ಗೆ ಅನ್ಯಾಯವಾಗಿದ್ದಕ್ಕೆ ವಿಕೆಟ್ ಕೀಪರ್ ರಿಷಬ್ ಪಂತ್ ಮೈದಾನದಲ್ಲೇ ಕ್ಷಮೆ ಕೇಳಿದರು. ಅಷ್ಟಕ್ಕೂ ಅಂತಹದ್ದೇನಾಯ್ತು ಇಲ್ಲಿದೆ ನೋಡಿ ವಿವರ.

ಎರಡನೇ ದಿನವಾದ ಇಂದು ಭಾರತ ಮೊದಲ ಇನಿಂಗ್ಸ್ ನಲ್ಲಿ 376 ರನ್ ಗಳಿಗೆ ಆಲೌಟ್ ಆಯಿತು. ನಿನ್ನೆ 86 ರನ್ ಗಳಿಸಿ ಶತಕದ ನಿರೀಕ್ಷೆಯಲ್ಲಿದ್ದ ರವೀಂದ್ರ ಜಡೇಜಾ ಇಂದು ಒಂದೂ ರನ್ ಗಳಿಸದೇ ಔಟಾದರು. ಇದರಿಂದ ಶತಕ ತಪ್ಪಿಸಿಕೊಂಡು ನಿರಾಸೆ ಅನುಭವಿಸಿದರು. ಆದರೆ ಅಶ್ವಿನ್ ಅಂತಿಮವಾಗಿ 113 ರನ್ ಗಳಿಸಿ ಔಟಾದರು.

ಇದೀಗ ಬಾಂಗ್ಲಾ ಮೊದಲ ಇನಿಂಗ್ಸ್ ಆರಂಭಿಸಿದ್ದು ಭೋಜನ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 26 ರನ್ ಗಳಿಸಿ ಸಂಕಷ್ಟದಲ್ಲಿದೆ. ಭಾರತದ ಪರ ಜಸ್ಪ್ರೀತ್ ಬುಮ್ರಾ ಮೊದಲ ಓವರ್ ನಲ್ಲೇ ಶದ್ಮಾನ್ ಇಸ್ಲಾಮ್ ರನ್ನು 2 ರನ್ ಗೆ ಕ್ಲೀನ್ ಬೌಲ್ಡ್ ಮಾಡಿದರು. ಅದಾದ ಬಳಿಕ ಆಕಾಶ್ ದೀಪ್ ಸಿಂಗ್ 2 ವಿಕೆಟ್ ಕಬಳಿಸಿದರು.

ಆದರೆ ಈ ನಡುವೆ ಮೊಹಮ್ಮದ್ ಸಿರಾಜ್ ಗೆ ವಿಕೆಟ್ ಸಿಗಬೇಕಿತ್ತು. ಅವರು ಎಸೆದ ಎಸೆತವೊಂದು ಎಲ್ ಬಿಡಬ್ಲ್ಯು ಆಗುವುದರಲ್ಲಿತ್ತು. ಆದರೆ ಅಂಪಾಯರ್ ನಾಟೌಟ್ ನೀಡಿದರು. ವಿಕೆಟ್ ಕೀಪರ್ ರಿಷಬ್ ಪಂತ್ ಸಲಹೆ ಕೇಳಿದ ನಾಯಕ ರೋಹಿತ್ ಶರ್ಮಾ ಬಾಲ್ ಹೈಟ್ ಲ್ಲಿತ್ತು ಎಂದು ಡಿಆರ್ ಎಸ್ ಗೂ ಮನವಿ ಸಲ್ಲಿಸಲಿಲ್ಲ. ಆದರೆ ಟಿವಿ ರಿಪ್ಲೇ ನೋಡಿದಾಗ ಎಲ್ ಬಿ ಆಗಿದ್ದು ಸ್ಪಷ್ಟವಾಗಿತ್ತು.

ಹೀಗಾಗಿ ಮೊಹಮ್ಮದ್ ಸಿರಾಜ್ ಹತಾಶರಾದರೆ, ಇತ್ತ ರಿಷಬ್ ಪಂತ್ ಸರಿಯಾಗಿ ಸಲಹೆ ನೀಡದೇ ಇದ್ದಿದ್ದಕ್ಕೆ ಮೈದಾನದಲ್ಲೇ ಕೈ ಎತ್ತಿ ಸಿರಾಜ್ ಗೆ ಕ್ಷಮೆ ಕೇಳಿದರು. ಅತ್ತ ರೋಹಿತ್ ಕೂಡಾ ಹತಾಶೆಗೊಂಡು ಒಂದು ಸ್ಮೈಲ್ ಕೊಟ್ಟರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments