Webdunia - Bharat's app for daily news and videos

Install App

ರೋಹಿತ್ ರನ್ನು ಮುಂಬೈ ನಾಯಕತ್ವದಿಂದ ಕಿತ್ತುಹಾಕಿದ್ದನ್ನು ಸಮರ್ಥಿಸಿದ ಕೋಚ್ ಗೆ ರಿತಿಕಾ ಟಾಂಗ್

Krishnaveni K
ಮಂಗಳವಾರ, 6 ಫೆಬ್ರವರಿ 2024 (14:51 IST)
ಮುಂಬೈ: ರೋಹಿತ್ ಶರ್ಮಾರನ್ನು ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ಕಿತ್ತು ಹಾಕಿದ್ದನ್ನು ಸಮರ್ಥಿಸಿದ ಕೋಚ್ ಮಾರ್ಕ್ ಬೌಚರ್ ಗೆ ರೋಹಿತ್ ಪತ್ನಿ ರಿತಿಕಾ ಸಜ್ ದೇ ಟಾಂಗ್ ಕೊಟ್ಟಿದ್ದಾರೆ.

ಪಾಡ್ ಕಾಸ್ಟ್ ನಲ್ಲಿ ಮುಂಬೈ ಮುಖ್ಯ ಕೋಚ್ ಮಾರ್ಕ್ ಬೌಚರ್ ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾರ್ದಿಕ್ ಪಾಂಡ್ಯಗೆ ಪಟ್ಟ ಕಟ್ಟಿದ್ದರ ಅಸಲಿ ಕಾರಣವೇನೆಂದು ಬಹಿರಂಗಪಡಿಸಿದ್ದರು. ಭಾರತದಲ್ಲಿ ಬಹಳಷ್ಟು ಮಂದಿಗೆ ಇದು ಅರ್ಥವಾಗಲ್ಲ. ಯಾಕೆಂದರೆ ಅವರು ತುಂಬಾ ಭಾವನಾತ್ಮಕವಾಗಿರುತ್ತಾರೆ. ಈ ಭಾವನೆಗಳನ್ನು ದೂರವಿಡಿ. ಈ ನಿರ್ಧಾರದ ಹಿಂದೆ ಕೇವಲ ಕ್ರಿಕೆಟಿಂಗ್  ಕಾರಣವಿತ್ತೇ ಹೊರತು ಬೇರೇನೂ ಇಲ್ಲ ಎಂದಿದ್ದರು.

ರಿತಿಕಾ ಕಾಮೆಂಟ್
ಮಾರ್ಕ್ ಬೌಚರ್ ರ ಈ ಸಂದರ್ಶನಕ್ಕೆ ರೋಹಿತ್ ಪತ್ನಿ ರಿತಿಕಾ ಇನ್ ಸ್ಟಾಗ್ರಾಂನಲ್ಲಿ ಕಾಮೆಂಟ್ ಮಾಡಿದ್ದು, ‘ಇದರಲ್ಲಿ ಹಲವು ತಪ್ಪುಗಳಿವೆ’ ಎಂದು ಕಾಮೆಂಟ್ ಮಾಡಿದ್ದಾರೆ. ರಿತಿಕಾರ ಈ ಕಾಮೆಂಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾಕಿದಾಗಲೂ ರಿತಿಕಾ ಸೋಷಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದರು.

ಮುಂಬೈ ಇಂಡಿಯನ್ಸ್ ತಂಡವನ್ನು ಅತೀ ಹೆಚ್ಚು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿಸಿದ ರೋಹಿತ್ ರನ್ನು ಇದ್ದಕ್ಕಿದ್ದಂತೆ ನಾಯಕತ್ವದಿಂದ ಕಿತ್ತು ಹಾಕಿ ಅವಮಾನ ಮಾಡಲಾಗಿದೆ ಎಂದು ಅಭಿಮಾನಿಗಳು ಫ್ರಾಂಚೈಸಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕರು ಇನ್ನು ಮುಂದೆ ಮುಂಬೈ ಬೆಂಬಲಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಕೇವಲ ರಿತಿಕಾ ಮಾತ್ರವಲ್ಲ, ತಂಡದ ಸಹ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ಸೇರಿದಂತೆ ಹಲವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಅಷ್ಟು ದಿನ ತಂಡದ ನಾಯಕರಾಗಿದ್ದ ರೋಹಿತ್ ಗೆ ಈ ರೀತಿ ಮಾಡಿದ್ದು ಹೃದಯ ಚೂರು ಮಾಡಿದೆ ಎಂದು ಪರೋಕ್ಷವಾಗಿ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments