Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿ ಫೈನಲ್ ನಾಯಕನಾಗಿ ರೋಹಿತ್ ಶರ್ಮಾ ಕೊನೇ ಪಂದ್ಯ

Krishnaveni K
ಶುಕ್ರವಾರ, 7 ಮಾರ್ಚ್ 2025 (13:55 IST)
ದುಬೈ: ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯ ನಾಯಕನಾಗಿ ರೋಹಿತ್ ಶರ್ಮಾಗೆ ಕೊನೆಯ ಪಂದ್ಯ ಎಂದು ಹೇಳಲಾಗುತ್ತಿದೆ. ಬಿಸಿಸಿಐ ಈಗಾಗಲೇ ರೋಹಿತ್ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ.

ರೋಹಿತ್ ಶರ್ಮಾ ವೈಟ್ ಬಾಲ್ ಕ್ರಿಕೆಟ್ ನಲ್ಲಿ ನಾಯಕನಾಗಿ ಯಶಸ್ವಿಯಾಗಿದ್ದರು. ಟೀಂ ಇಂಡಿಯಾಕ್ಕೆ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟವರು. ಇದೀಗ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆ ತಲುಪಿದ್ದಾರೆ

ಆದರೆ ಇತ್ತೀಚೆಗಿನ ದಿನಗಳಲ್ಲಿ ರೋಹಿತ್ ಫಾರ್ಮ್ ಮೊದಲಿನಂತಿಲ್ಲ. ಪ್ರತೀ ಪಂದ್ಯದಲ್ಲೂ ಅವರ ಸ್ಕೋರ್ ಹೆಚ್ಚೆಂದರೆ 30 ರನ್ ದಾಟುವುದಿಲ್ಲ. ಒಬ್ಬ ಆರಂಭಿಕನಾಗಿ ಕೇವಲ 20-30 ರನ್ ಗಳಿಸಿ ಔಟಾಗುವುದರಿಂದ ತಂಡವೂ ಸಂಕಷ್ಟಕ್ಕೆ ಸಿಲುಕುತ್ತಿದೆ. ಇದರ ಬಗ್ಗೆ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಡಾ ಟೀಕಿಸಿದ್ದಾರೆ.

ಹೀಗಾಗಿ ಫೈನಲ್ ಪಂದ್ಯದಲ್ಲೂ ಬ್ಯಾಟಿಂಗ್ ನಲ್ಲಿ ವಿಫಲರಾದರೆ ಪಂದ್ಯದ ಫಲಿತಾಂಶ ಏನೇ ಇದ್ದರೂ ರೋಹಿತ್ ಮುಲಾಜಿಲ್ಲದೇ ನಿವೃತ್ತಿಯಾಗಲಿದ್ದಾರೆ ಎನ್ನುತ್ತಿದೆ ಮೂಲಗಳು. ಮುಂಬರುವ ಏಕದಿನ ವಿಶ್ವಕಪ್ ಗೆ ಇನ್ನು ಎರಡು ವರ್ಷವಿದೆ.

ಹೀಗಾಗಿ ಅಷ್ಟರಲ್ಲಿ ಹೊಸ ನಾಯಕನನ್ನು ತಯಾರಿ ಮಾಡಲು ಸಮಯ ಬೇಕಾಗುತ್ತದೆ. ಇದರಿಂದ ರೋಹಿತ್ ಗೆ ನಾಯಕತ್ವದಿಂದ ನಿವೃತ್ತಿಯಾಗಲು ಬಿಸಿಸಿಐ ಸೂಚಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಟಿ20 ವಿಶ್ವಕಪ್ ಗೆದ್ದ ಬಳಿಕ ರೋಹಿತ್ ಮತ್ತು ಕೊಹ್ಲಿ ಇಬ್ಬರೂ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ರಿಂದ ದೊಡ್ಡ ಘೋಷಣೆಯೊಂದು ಬರಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments