Webdunia - Bharat's app for daily news and videos

Install App

ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಗೆ ಸಖತ್ ಟಾಂಗ್ ಕೊಟ್ಟ ರೋಹಿತ್ ಶರ್ಮಾ

Krishnaveni K
ಮಂಗಳವಾರ, 27 ಫೆಬ್ರವರಿ 2024 (10:33 IST)
Photo Courtesy: Twitter
ರಾಂಚಿ: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯ ಗೆಲ್ಲುವುದರ ಜೊತೆಗೆ ಸರಣಿ ಗೆಲುವು ಸಾಧಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇತ್ತೀಚೆಗೆ ಕುಂಟು ನೆಪ ಹೇಳಿ ತಂಡದಿಂದ ತಪ್ಪಿಸಿಕೊಂಡ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸರಣಿ ಗೆಲುವಿನ ಬಳಿಕ ರೋಹಿತ್ ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ರೋಹಿತ್ ಯುವ ಆಟಗಾರರ ಬಗ್ಗೆ ವಿಶೇಷವಾಗಿ ಕೊಂಡಾಡಿದ್ದಾರೆ. ಜೊತೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಆಡಲು ಯುವ ಕ್ರಿಕೆಟಿಗರು ಮನಸ್ಸು ಮಾಡಬೇಕು ಎಂದೂ ಒತ್ತಿ ಹೇಳಿದ್ದಾರೆ.

‘ಟೆಸ್ಟ್ ಕ್ರಿಕೆಟ್ ಎನ್ನುವುದು ಅತ್ಯಂತ ಕಠಿಣ ಮಾದರಿಯ ಕ್ರಿಕೆಟ್. ಈ ಮಾದರಿಯ ಕ್ರಿಕೆಟ್ ನಲ್ಲಿ ನಿಮಗೆ ಯಶಸ್ಸು ಸಿಗಬೇಕಾದರೆ ಗೆಲುವಿನ ಹಸಿವು ಇರಬೇಕು. ಯಾವ ಆಟಗಾರರಲ್ಲಿ ಗೆಲುವಿನ ಹಸಿವಿದೆ, ಯಾರಲ್ಲಿ ಇಲ್ಲ ಎನ್ನವುದು ನೋಡಿದರೇ ಗೊತ್ತಾಗುತ್ತದೆ’ ಎಂದು ರೋಹಿತ್ ಹೇಳಿದ್ದಾರೆ. ರೋಹಿತ್ ಈ ಮಾತನ್ನು ಮಾರ್ಮಿಕವಾಗಿ ಹೇಳಿದ್ದು ಇದನ್ನು ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಆಡುವುದನ್ನು ತಪ್ಪಿಸಿಕೊಂಡಿರುವ ಇಶಾನ್ ಕಿಶನ್ ಮತ್ತು ಗಾಯದ ನೆಪದಿಂದ ತಂಡದಿಂದ ಹೊರಗುಳಿದಿರುವ ಶ್ರೇಯಸ್ ಅಯ್ಯರ್ ಉದ್ದೇಶಿಸಿಯೇ ಹೇಳಿದ್ದಾರೆ ಎಂದು ಅಭಿಮಾನಿಗಳು ಅರ್ಥ ಮಾಡಿಕೊಂಡಿದ್ದಾರೆ.

ಮಾನಸಿಕವಾಗಿ ಬಳಲಿರುವುದಾಗಿ ನೆಪ ಹೇಳಿ ಟೆಸ್ಟ್ ತಂಡದಿಂದ ಹೊರಗುಳಿದಿರುವ ಇಶಾನ್ ಕಿಶನ್ ಐಪಿಎಲ್ ಗೆ ತಯಾರಾಗುತ್ತಿದ್ದಾರೆ. ರಣಜಿ ಆಡುವುದನ್ನೂ ತಪ್ಪಿಸಿಕೊಂಡಿದ್ದಾರೆ. ಇದು ಬಿಸಿಸಿಐ, ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಸಿಟ್ಟು ತರಿಸಿದೆ. ಅತ್ತ ಶ್ರೇಯಸ್ ಅಯ್ಯರ್ ಕೂಡಾ ರಣಜಿ ಆಡುವುದನ್ನು ತಪ್ಪಿಸಲು ಗಾಯದ ನೆಪ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments