Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯ, ನತಾಶ ಸ್ಟಾಂಕೋವಿಚ್ ದಾಂಪತ್ಯದಲ್ಲಿ ಬಿರುಕು

Krishnaveni K
ಶುಕ್ರವಾರ, 24 ಮೇ 2024 (09:16 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ, ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂದು ವರದಿಗಳಾಗಿವೆ. ಹಾರ್ದಿಕ್ ಸರ್ಬಿಯಾ ಮೂಲದ ನತಾಶರನ್ನು ವಿವಾಹವಾಗಿದ್ದರು.

ಇತ್ತೀಚೆಗೆ ನಡೆದ ಕೆಲವು ಘಟನೆಗಳಿಂದಾಗಿ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಈಗಾಗಲೇ ನತಾಶರನ್ನು ಸೋಷಿಯಲ್ ಮೀಡಿಯಾದಲ್ಲಿ ಅನ್ ಫಾಲೋ ಮಾಡಿದ್ದಾರೆ. ಕೆಲವು ದಿನಗಳಿಂದ ಇಬ್ಬರೂ ಫ್ಯಾಮಿಲಿ ಫೋಟೋವನ್ನೇ ಹಾಕಿಕೊಳ್ಳುತ್ತಿಲ್ಲ.

ಇತ್ತೀಚೆಗೆ ನತಾಶ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದು ಬಿಟ್ಟರೆ ಇಬ್ಬರ ನಡುವೆ ಯಾವುದೇ ಸಂದೇಶ ವಿನಿಮಯವಾಗಿಲ್ಲ. ಇತ್ತ ನತಾಶ ತಮ್ಮ ಇನ್ ಸ್ಟಾ ಪ್ರೊಫೈಲ್ ನಿಂದ ಹಾರ್ದಿಕ್ ಹೆಸರು ತೆಗೆದು ಹಾಕಿದ್ದಾರೆ. ಇತ್ತೀಚೆಗೆ ಎಲ್ಲೂ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿಲ್ಲ.

ಹೀಗಾಗಿ ಇಬ್ಬರ ದಾಂಪತ್ಯದಲ್ಲಿ ಎನೋ ಸರಿಯಿ‍ಲ್ಲ ಅನುಮಾನ ಹುಟ್ಟಲು ಕಾರಣವಾಗಿದೆ. ಜೊತೆಗೆ ಇತ್ತೀಚೆಗೆ ಹಾರ್ದಿಕ್ ಮಾನಸಿಕವಾಗಿ ತೀರಾ ಒತ್ತಡದಲ್ಲಿದ್ದಂತೆ ಕಾಣುತ್ತಿದ್ದಾರೆ. ಇದೆಲ್ಲದರ ಹಿಂದೆ ಕೌಟುಂಬಿಕ ಕಾರಣವೂ ಇದೆ ಎಂಬ ಅನುಮಾನ ಮೂಡಿದೆ.

ಹಾರ್ದಿಕ್ ಮತ್ತು ನತಾಶ ದಂಪತಿಗೆ ಓರ್ವ ಪುತ್ರನಿದ್ದಾನೆ. ಇಬ್ಬರೂ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದರು. ಬಳಿಕ ಸರಳವಾಗಿ ಮದುವೆಯಾಗಿದ್ದರು. ಮಗು ಜನಿಸಿದ ಬಳಿಕ ಸಾಂಪ್ರದಾಯಿಕವಾಗಿ ಹಿಂದೂ ಮತ್ತು ಕ್ರಿಶ್ಚಿಯನ್ ಧರ್ಮದ ಪ್ರಕಾರ ಅದ್ಧೂರಿಯಾಗಿ ಎರಡನೇ ಬಾರಿಗೆ ಮದುವೆಯಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments