Webdunia - Bharat's app for daily news and videos

Install App

ಕೊನೆಗೂ ಟಾಸ್‌ ಗೆದ್ದ ಸ್ಮೃತಿ ಮಂದಾನ ಫೀಲ್ಡಿಂಗ್‌ ಆಯ್ಕೆ: ಆರ್‌ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ

Sampriya
ಶನಿವಾರ, 8 ಮಾರ್ಚ್ 2025 (19:19 IST)
Photo Courtesy X
ಲಖನೌ: ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಯು.ಪಿ ವಾರಿಯರ್ಸ್‌ ಮುಖಾಮುಖಿಯಾಗುತ್ತಿದೆ. ಹಲವು ಪಂದ್ಯಗಳ ನಂತರ ಟಾಸ್‌ ಗೆದ್ದ ಸ್ಮೃತಿ ಮಂದಾನ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಪ್ಲೇ ಆಫ್‌ ಕನಸನ್ನು ಜೀವಂತವಾಗಿ ಇರಿಸಿಕೊಳ್ಳಲು ಆರ್‌ಸಿಬಿ ತಂಡವು ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ. ಈ ಪಂದ್ಯವನ್ನು ಸೋತಲ್ಲಿ ನಾಕೌಟ್‌ ರೇಸ್‌ನಿಂದ ಬೆಂಗಳೂರು ತಂಡ ಹೊರಬೀಳಲಿದೆ. ಈ ಪಂದ್ಯ ಮಾತ್ರವಲ್ಲದೆ ಲೀಗ್‌ ಹಂತದ ಕೊನೆಯ ಪಂದ್ಯವನ್ನೂ ಭಾರೀ ಅಂತರದಿಂದ ಗೆಲ್ಲಬೇಕಾದ ಒತ್ತಡದಲ್ಲಿ ಆರ್‌ಸಿಬಿ ತಂಡವಿದೆ.

ಬೆಂಗಳೂರು ತಂಡವು ವಡೋದರದಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಆದರೆ, ಬೆಂಗಳೂರಿನಲ್ಲಿ ನಡೆದ ನಾಲ್ಕು ಪಂದ್ಯಗಳಲ್ಲೂ ಪರಾಭವಗೊಂಡ ತವರಿನ ಅಭಿಮಾನಿಗಳಿಗೆ ಭಾರೀ ನಿರಾಸೆ ಉಂಟು ಮಾಡಿತ್ತು.

ಮತ್ತೊಂದೆಡೆ ದೀಪ್ತಿ ಶರ್ಮಾ ನಾಯಕತ್ವದ ಯು.ಪಿ. ವಾರಿಯರ್ಸ್‌ ತಂಡವು ನಾಕೌಟ್‌ ಹಾದಿಯಿಂದ ಹೊರಬಿದ್ದಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ವಾರಿಯರ್ಸ್‌ ತಂಡವು ಕೊನೆಯ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಈಗಾಗಲೇ ನಾಕೌಟ್‌ ಹಂತ ಪ್ರವೇಶಿಸಿದೆ.
 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments