Webdunia - Bharat's app for daily news and videos

Install App

ರೋಹಿತ್ ಶರ್ಮಾ ಸಕ್ಸಸ್ ಆದ ಬಳಿಕ ಎಲ್ರೂ ನನ್ನ ಮರೆತೇ ಬಿಟ್ಟರು: ಅಳಲು ತೋಡಿಕೊಂಡ ಸೌರವ್ ಗಂಗೂಲಿ

Krishnaveni K
ಸೋಮವಾರ, 15 ಜುಲೈ 2024 (10:52 IST)
ಕೋಲ್ಕೊತ್ತಾ: ಟೀಂ ಇಂಡಿಯಾ ನಾಯಕರಾಗಿ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಗೆದ್ದು ಯಶಸ್ವೀ ನಾಯಕ ಎಂದು ಸಾಬೀತುಪಡಿಸಿದ ಬಳಿಕ ಎಲ್ಲರೂ ನನ್ನನ್ನು ಮರೆತೇಬಿಟ್ಟರು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ, ಕ್ರಿಕೆಟಿಗ ಸೌರವ್ ಗಂಗೂಲಿ ಅಳಲು ತೋಡಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಬಳಿಕ ರೋಹಿತ್ ಶರ್ಮಾರನ್ನು ಟೀಂ ಇಂಡಿಯಾದ ಮೂರೂ ಮಾದರಿಯ ನಾಯಕರಾಗಿ ಆಯ್ಕೆ ಮಾಡುವಲ್ಲಿ ಬಿಸಿಸಿಐ ಅಂದಿನ ಅಧ್ಯಕ್ಷರಾಗಿದ್ದ ಗಂಗೂಲಿ ಪಾತ್ರ ದೊಡ್ಡದು. ಅವರ ಒತ್ತಾಯದ ಮೇರೆಗೇ ರೋಹಿತ್ ಟೆಸ್ಟ್ ನಲ್ಲೂ ತಂಡದ ನಾಯಕತ್ವ ವಹಿಸಲು ಸಿದ್ಧರಾಗಿದ್ದರು ಎನ್ನಲಾಗಿದೆ. ಇದನ್ನು ಸ್ವತಃ ಗಂಗೂಲಿಯೇ ಹೇಳಿಕೊಂಡಿದ್ದರು.

ಆರಂಭದಲ್ಲಿ ರೋಹಿತ್ ಗೆ ಅಷ್ಟೊಂದು ಯಶಸ್ಸು ಸಿಕ್ಕಿರಲಿಲ್ಲ. ಆಗೆಲ್ಲಾ ಕೊಹ್ಲಿ ಅಭಿಮಾನಿಗಳು ಗಂಗೂಲಿಯನ್ನು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದರು. ಚಿನ್ನದಂತಾ ನಾಯಕನನ್ನು ಕಿತ್ತು ಹಾಕಿ ರೋಹಿತ್ ಗೆ ನಾಯಕತ್ವ ಪಟ್ಟ ನೀಡಿದರು ಎಂದು ಗಂಗೂಲಿಯನ್ನು ಟೀಕಿಸುತ್ತಿದ್ದರು.

ಇದೀಗ ಟಿ20 ವಿಶ್ವಕಪ್ ನಲ್ಲಿ ರೋಹಿತ್ ಶರ್ಮಾ ಫೈನಲ್ ನಲ್ಲಿ ಗೆದ್ದು 17 ವರ್ಷಗಳ ಬಳಿಕ ಭಾರತಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟಿದ್ದಾರೆ. ಅಲ್ಲದೆ, 10 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನೂ ನೀಗಿಸಿದ್ದಾರೆ. ಆದರೆ ಈ ಯಶಸ್ಸಿನ ಬಳಿಕ ನನ್ನನ್ನು ಎಲ್ಲರೂ ಮರೆತು ಹೋದರು. ಅಂದು ತಮ್ಮನ್ನು ಟೀಕಿಸಿದವರು ಈಗ ರೋಹಿತ್ ಯಶಸ್ವಿಯಾದಾಗ ಯಾರೂ ಕ್ರೆಡಿಟ್ ಕೊಡುತ್ತಿಲ್ಲ ಎಂದು ಗಂಗೂಲಿ ಬೇಸರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments