Webdunia - Bharat's app for daily news and videos

Install App

ಸೂರ್ಯಕುಮಾರ್ ಯಾದವ್ ವಿಸಿಟ್ ಮಾಡಿದ ಉಡುಪಿಯ ಈ ವಿಶೇಷ ಬಂಗಲೆ ಯಾವುದು ಹೇಳಿ ನೋಡೋಣ

Krishnaveni K
ಬುಧವಾರ, 10 ಜುಲೈ 2024 (09:27 IST)
Photo Credit: Instagram
ಉಡುಪಿ: ಪತ್ನಿಯ ತವರು ಉಡುಪಿ-ಮಂಗಳೂರಿಗೆ ಬಂದಿರುವ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಆ ಜಾಗದ ಫೋಟೋವನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ಆ ಜಾಗದ ವಿಶೇಷತೆ ಏನು ಗೊತ್ತಾ?

ಸೂರ್ಯಕುಮಾರ್ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಕರಾವಳಿಯವರು. ತಮ್ಮ ತವರಿಗೆ ಪತಿಯನ್ನು ಕರೆದುಕೊಂಡು ದೇವಿಶಾ ಬಂದಿದ್ದಾರೆ. ಜೊತೆಗೆ ಉಡುಪಿಯ ಮಾರಿಗುಡಿ ಕಾಪಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲೇ ಸೂರ್ಯಕುಮಾರ್ ದಂಪತಿ ಕರಾವಳಿಗೆ ಭೇಟಿ ನೀಡಿದ್ದು ವಿಶೇಷ.

ಸದ್ಯಕ್ಕೆ ಕ್ರಿಕೆಟ್ ನಿಂದ ಬಿಡುವು ಪಡೆದಿರುವ ಸೂರ್ಯಕುಮಾರ್ ಯಾದವ್ ಕರಾವಳಿಯ ಸುಂದರ ಪರಿಸರದಲ್ಲಿ ಅಡ್ಡಾಡುತ್ತಿದ್ದಾರೆ. ಅದರಲ್ಲೂ ಅವರ ಸೋಷಿಯಲ್ ಮೀಡಿಯಾದಲ್ಲಿ ಉಡುಪಿಯ ವಿಶೇಷ ಹೆರಿಟೇಜ್ ಬಂಗಲೆಯೊಂದನ್ನು ಹಂಚಿಕೊಂಡಿದ್ದಾರೆ. ಈ ಬಂಗಲೆಯನ್ನು ನಿಮಗೂ ಎಲ್ಲೋ ನೋಡಿದಂತಾಗಬಹುದು.

ಇದು ಉಡುಪಿಯ ಮುಳೂರಿನಲ್ಲಿರುವ ಸಾಯಿ ರಾಧಾ ಹೆರಿಟೇಜ್ ಬಂಗಲೆಯಾಗಿದೆ. ಈ ಬಂಗಲೆಯಲ್ಲೇ ಕಾಂತಾರ ಸಿನಿಮಾದ ಆರಂಭದಲ್ಲಿ ಬರುವ ಅರಮನೆ ಭಾಗದ ಚಿತ್ರೀಕರಣವಾಗಿತ್ತು. ಇದನ್ನು ಸೂರ್ಯ ಕೂಡಾ ಗುರುತಿಸಿದ್ದಾರೆ. ಇದನ್ನು ನೆನಪಿಸಿಕೊಂಡು ಫೋಟೋ ಹಂಚಿಕೊಂಡಿರುವ ಸೂರ್ಯ ಇದು ಕಾಂತಾರ ಮನೆ ಎಂದು ಸ್ಟೇಟಸ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments