Webdunia - Bharat's app for daily news and videos

Install App

ಸಂಜು ಸ್ಯಾಮ್ಸನ್ ಗಾಗಿ ಮೈದಾನದಲ್ಲೂ ಎದುರಾಳಿಗಳ ಜೊತೆ ಸೂರ್ಯಕುಮಾರ್ ಯಾದವ್ ಕಿತ್ತಾಟ

Krishnaveni K
ಶನಿವಾರ, 9 ನವೆಂಬರ್ 2024 (11:14 IST)
Photo Credit: X
ಡರ್ಬನ್: ಸಂಜು ಸ್ಯಾಮ್ಸನ್ ಗೆ ಟೀಂ ಇಂಡಿಯಾ ಟಿ20 ಫಾರ್ಮ್ಯಾಟ್ ನಲ್ಲಿ ಅವಕಾಶ ನೀಡಲು ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಅವರೇ ಕಾರಣ. ಈಗ ಸಂಜು ಸ್ಯಾಮ್ಸನ್ ಗಾಗಿ ಮೈದಾನದಲ್ಲೂ ಎದುರಾಳಿ ಆಟಗಾರರೊಂದಿಗೆ ಕಿತ್ತಾಟವಾಡಿದ ಪ್ರಸಂಗ ನಡೆದಿದೆ.

ನಾಯಕನಾಗಿ ಸೂರ್ಯಕುಮಾರ್ ಯಾದವ್ ಕೂಲ್ ಆಗಿಯೇ ಇದುವರೆಗೆ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಮಾತ್ರ ಎದುರಾಳಿ ಆಟಗಾರ ಜೇನ್ ಸನ್ ಜೊತೆ ವಾಗ್ವಾದಕ್ಕಿಳಿದರು. ಅದೂ ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಸಂಜು ಸ್ಯಾಮ್ಸನ್ ಪರವಾಗಿ.

ದ ಆಫ್ರಿಕಾ ಇನಿಂಗ್ಸ್ ನ 15.3 ನೇ ಓವರ್ ನಲ್ಲಿ ಘಟನೆ ನಡೆದಿದೆ. ಬ್ಯಾಟಿಂಗ್ ಮಾಡುತ್ತಿದ್ದ ಜೇನ್ ಸನ್ ಭಾರತದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ವರ್ತನೆ ಬಗ್ಗೆ ತಗಾದೆ ತೆಗೆದಿದ್ದಾರೆ. ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಸಂಜು ಪದೇ ಪದೇ ಪಿಚ್ ಗೆ ಬಂದು ಬಾಲ್ ಕಲೆಕ್ಟ್ ಮಾಡುತ್ತಿದ್ದರು ಎಂಬುದು ಅವರ ಆಕ್ಷೇಪವಾಗಿತ್ತು.

ಆದರೆ ಜೇನ್ ಸನ್ ತಡೆ ಮಾಡುತ್ತಿದ್ದುದರಿಂದಲೇ ಸಂಜು ಅನಿವಾರ್ಯವಾಗಿ ಪಿಚ್ ನಲ್ಲಿ ಕಾಲು ಇಡುತ್ತಿದ್ದರು ಎಂದು ಭಾರತೀಯ ಆಟಗಾರರ ವಾದವಾಗಿತ್ತು. ಸಂಜು ವರ್ತನೆ ಪ್ರಶ್ನೆ ಮಾಡಿದ್ದಕ್ಕೆ ಸೂರ್ಯಕುಮಾರ್ ಯಾದವ್ ಎದುರಾಳಿ ಬ್ಯಾಟಿಗರ ಜೊತೆ ವಾಗ್ವಾದವನ್ನೇ ನಡೆಸಿದರು. ಬಳಿಕ ಅಂಪಾಯರ್ ಮಧ್ಯಪ್ರವೇಶಿಸಿದರು. ಈ ವೇಳೆ ಸೂರ್ಯ ಅಂಪಾಯರ್ ಗೂ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಟ್ಟರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments