Webdunia - Bharat's app for daily news and videos

Install App

T20 WC 2024: ಎರಡನೇ ಸೂಪರ್ 8 ಹಣಾಹಣಿಯಲ್ಲಿ ಬಾಂಗ್ಲಾದೇಶ ಬಗ್ಗುಬಡಿಯಲು ಟೀಂ ಇಂಡಿಯಾ ಸಜ್ಜು

Krishnaveni K
ಶನಿವಾರ, 22 ಜೂನ್ 2024 (08:51 IST)
ಆಂಟಿಗುವಾ: ಟಿ20 ವಿಶ್ವಕಪ್ 2024 ರಲ್ಲಿ ಇಂದು ಟೀಂ ಇಂಡಿಯಾ ಎರಡನೇ ಸೂಪರ್ 8 ಹಂತದ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಈ ಪಂದ್ಯ ಆಂಟಿಗುವಾದಲ್ಲಿ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯದಂತೇ ಇತ್ತೀಚೆಗಿನ ದಿನಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವೂ ಜಿದ್ದಾಜಿದ್ದಿನಿಂದ ಕೂಡಿರುತ್ತದೆ. 2007 ರಲ್ಲಿ ರಾಹುಲ್ ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ ವಿಶ್ವಕಪ್ ನಲ್ಲಿ ಸೋತ ಬಳಿಕ ಬಾಂಗ್ಲಾ ಆಟಗಾರರು ಕುಹುಕವಾಡಿದ್ದು ಟೀಂ ಇಂಡಿಯಾ ಅಭಿಮಾನಿಗಳನ್ನು ಕೆರಳಿಸಿತ್ತು. ಅದಾದ ಬಳಿಕ ಎರಡೂ ತಂಡಗಳ ನಡುವಿನ ವೈರುಧ್ಯ ಇಂದಿಗೂ ಮುಂದುವರಿದಿದೆ.

ಇದೀಗ ಟಿ20 ವಿಶ್ವಕಪ್ ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಇದುವರೆಗೆ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನವನ್ನೇ ನೀಡುತ್ತಾ ಬಂದಿದೆ. ಹಾಗಿದ್ದರೂ ಕಳೆದ ಪಂದ್ಯದಲ್ಲಿ ಸ್ಪಿನ್ನರ್ ಗಳ ನೆರವಾಗುವ ಪಿಚ್ ಎಂಬ ಕಾರಣಕ್ಕೆ ಮೊಹಮ್ಮದ್ ಸಿರಾಜ್ ರನ್ನು ಹೊರಗಿಟ್ಟು ಕುಲದೀಪ್ ಯಾದವ್ ಗೆ ಅವಕಾಶ ನೀಡಲಾಗಿತ್ತು.

ಈ ಟೂರ್ನಿಯಲ್ಲಿ ಇದುವರೆಗೆ ಅವಕಾಶ ಸಿಕ್ಕಿಯೂ ಪ್ರದರ್ಶನ ನೀಡದ ಆಟಗಾರರ ಪೈಕಿ ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ ಮತ್ತು ಶಿವಂ ದುಬೆ ಇದ್ದಾರೆ. ಈ ಪೈಕಿ ಕೊಹ್ಲಿಯನ್ನು ಆರಂಭಿಕ ಸ್ಥಾನದಿಂದ ಕಿತ್ತು ಹಾಕಿ ಮತ್ತೆ ಮೂರನೇ ಕ್ರಮಾಂಕ ನೀಡುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ಅದಕ್ಕೆ ಮ್ಯಾನೇಜ್ ಮೆಂಟ್ ಇನ್ನೂ ಮನಸ್ಸು ಮಾಡುತ್ತಿಲ್ಲ. ಇತ್ತ ರವೀಂದ್ರ ಜಡೇಜಾ ಎಲ್ಲಾ ಪಂದ್ಯಗಳಲ್ಲೂ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದಾರೆ. ಶಿವಂ ದುಬೆಯದ್ದೂ ಹೇಳಿಕೊಳ್ಳುವಂತಹ ಕೊಡುಗೆ ಇಲ್ಲ. ಹೀಗಾಗಿ ಇವರಿಬ್ಬರನ್ನು ಬದಲಾಯಿಸಬೇಕೆಂಬ ಕೂಗು ಕೇಳಿಬಂದಿದೆ. ಇಂದಿನ ಪಂದ್ಯಕ್ಕೆ ಕೆಲವು ಬದಲಾವಣೆ ಖಚಿತವಾಗಿದೆ.

ಇತ್ತ ಬಾಂಗ್ಲಾದೇಶ ತಂಡ ಈಗಲೂ ಅನುಭವಿ ಶಕೀಬ್ ಅಲ್ ಹಸನ್ ರನ್ನು ನಂಬಿಕೊಂಡಿದೆ. ಭಾರತದ ಪ್ರತಿಭಾವಂತ ಬೌಲಿಂಗ್ ಎದುರಿಸಬೇಕಾದರೆ ಬಾಂಗ್ಲಾದ ನಜ್ಮುಲ್ ಹೊಸೈನ್, ಮುಹಮ್ಮದುಲ್ಲ, ತೌಹೀದ್ ಹೃದಯ್ ಮುಂತಾದ ಪ್ರತಿಭಾವಂತರು ತಮ್ಮ ಪ್ರತಿಭೆಗೆ ತಕ್ಕ ಆಟವಾಡಬೇಕಿದೆ. ಈ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments