Webdunia - Bharat's app for daily news and videos

Install App

ಮೊದಲ ಇನಿಂಗ್ಸ್ ನಲ್ಲಿ ಮಾಡಿದ ತಪ್ಪನ್ನು ದ್ವಿತೀಯ ಇನಿಂಗ್ಸ್ ನಲ್ಲಿ ಸರಿಪಡಿಸಿಕೊಂಡ ಟೀಂ ಇಂಡಿಯಾ

Webdunia
ಸೋಮವಾರ, 8 ಜನವರಿ 2018 (17:17 IST)
ಕೇಪ್ ಟೌನ್: ದ.ಆಫ್ರಿಕಾ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ರೋಚಕ ಹಂತ ತಲುಪಿದೆ. ಮೊದಲ ಇನಿಂಗ್ಸ್ ನಲ್ಲಿ ಆಫ್ರಿಕಾ ತಂಡಕ್ಕೆ ಜತೆಯಾಟ ನಡೆಸಲು ಬಿಟ್ಟು ತಪ್ಪು ಮಾಡಿದ್ದ ಭಾರತ ದ್ವಿತೀಯ ಇನಿಂಗ್ಸ್ ನಲ್ಲಿ ಅದಕ್ಕೆ ಅವಕಾಶ ಕೊಡಲಿಲ್ಲ.
 

ಇದರಿಂದಾಗಿ ಮೊದಲ ಇನಿಂಗ್ಸ್ ನ ಹಿನ್ನಡೆ ಹೊರತಾಗಿಯೂ ಟೀಂ ಇಂಡಿಯಾ ಗೆಲುವಿನ ವಾಸನೆ ನೀಡಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಅತಿಥೇಯರನ್ನು ಕೇವಲ 130 ರನ್ ಗಳಿಗೆ ಕಟ್ಟಿ ಹಾಕಿ ಭಾರತ ಒಳ್ಳೆಯ ಕೆಲಸವನ್ನೇ ಮಾಡಿದೆ.

ಇದಕ್ಕೆ ಕಾರಣ ಭಾರತದ ವೇಗಿಗಳಾದ ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾ. ನಾಲ್ವರೂ ವೇಗಿಗಳು ಸಂಘಟಿತ ಹೋರಾಟ ಕೈಗೊಂಡ ಪರಿಣಾಮ ಭಾರತಕ್ಕೆ 208 ರನ್ ಗಳ ಸುಲಭದ ಗುರಿ ಸಿಕ್ಕಿದೆ. ಬುಮ್ರಾ ಮತ್ತು ಶಮಿ ತಲಾ ಮೂರು ವಿಕೆಟ್ ಕಿತ್ತರೆ, ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ ತಲಾ 2 ವಿಕೆಟ್ ಗಳನ್ನು ಹಂಚಿಕೊಂಡರು. ಅಶ್ವಿನ್ ಕೇವಲ 1 ಓವರ್ ಎಸೆದರಷ್ಟೆ.  ಎಬಿಡಿ ವಿಲಿಯರ್ಸ್ 35 ರನ್ ಗಳಿಸಿದ್ದೇ ಗರಿಷ್ಠ ಮೊತ್ತ. ನಾಯಕ ಫಾ ಡು ಪ್ಲೆಸಿಸ್ ಶೂನ್ಯಕ್ಕೆ ಔಟಾಗಿದ್ದು ಆಫ್ರಿಕನ್ನರಿಗೆ ಆಘಾತ ನೀಡಿತ್ತು.

ಇದೀಗ ಇನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಕೂಡಾ ಶಿಖರ್ ಧವನ್ (16) ಮತ್ತು, ಮುರಳಿ ವಿಜಯ್ (13) ಕಳೆದುಕೊಂಡಿದ್ದು, ಚೇತೇಶ್ವರ ಪೂಜಾರ ಇನಿಂಗ್ಸ್ ಮುನ್ನಡೆಸುತ್ತಿದ್ದಾರೆ. ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 30 ರನ್ ಗಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments