ಭಾರತ-ದ.ಆಫ್ರಿಕಾ ಏಕದಿನ: ಟೀಂ ಇಂಡಿಯಾಗೆ ಹೋರಾಡಿದರೂ ದಕ್ಕದ ಜಯ

Webdunia
ಸೋಮವಾರ, 24 ಜನವರಿ 2022 (08:15 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಹೋರಾಡಿದರೂ ಟೀಂ ಇಂಡಿಯಾದ ಅದೃಷ್ಟ ಮಾತ್ರ ಬದಲಾಗಲಿಲ್ಲ.

ಮೂರನೇ ಏಕದಿನ ಪಂದ್ಯದಲ್ಲಿ ಇನ್ನೇನು ಗೆಲ್ಲುತ್ತದೆ ಎಂದುಕೊಂಡಿದ್ದಾಗ ಕೊನೆಯ ಹಂತದಲ್ಲಿ ವಿಕೆಟ್ ಕಳೆದುಕೊಂಡು 4 ರನ್ ಗಳಿಂದ ಸೋತು ಸರಣಿ ವೈಟ್ ವಾಶ್ ಅವಮಾನಕ್ಕೀಡಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 287 ರನ್ ಗಳಿಸಿತ್ತು.

ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ನಾಯಕ  ಕೆಎಲ್ ರಾಹುಲ್ ಕೇವಲ 9 ರನ್ ಗಳಿಸಿ ಔಟಾದರೂ, ಶಿಖರ್ ಧವನ್ (61), ವಿರಾಟ್ ಕೊಹ್ಲಿ (65) ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಆದರೆ ರಿಷಬ್ ಪಂತ್ ಶೂನ್ಯಕ್ಕೆ ನಿರ್ಗಮಿಸಿದ್ದು ಮತ್ತು ಶ್ರೇಯಸ್‍ ಐಯರ್ ಮತ್ತೆ ಇನಿಂಗ್ಸ್ ಕಟ್ಟಲು ವಿಫಲರಾಗಿದ್ದು ಭಾರತಕ್ಕೆ ದುಬಾರಿಯಾಯಿತು.

ಹಾಗಿದ್ದರೂ ದೀಪಕ್ ಚಹರ್ ಹೊಡೆಬಡಿಯ ಆಟದ ಮೂಲಕ ಗೆಲುವಿನ ಆಸೆ ಚಿಗುರಿಸಿದ್ದರು. ಇನ್ನೇನು ಭಾರತ ಗೆದ್ದೇ ಗೆಲ್ಲುತ್ತದೆ ಎನ್ನುವ ಹಂತದಲ್ಲಿ 34 ಎಸೆತಗಳಲ್ಲಿ 54 ರನ್ ಗಳಿಸಿದ್ದ ದೀಪಕ್ ಚಹರ್ ಔಟಾಗಿ ನಿರಾಸೆ ಅನುಭವಿಸಿದರು. ಇದರೊಂದಿಗೆ ಭಾರತದ ಕುಸಿತ ಆರಂಭವಾಯ್ತು. ಗೆಲುವಿಗೆ 10 ರನ್ ಗಳಿದ್ದಾಗ ಸತತವಾಗಿ ಕೊನೆಯ ಎರಡು ವಿಕೆಟ್ ಕಳೆದುಕೊಂಡು 49.2 ಓವರ್ ಗಳಲ್ಲಿ 283 ರನ್ ಗಳಿಗೆ ಆಲೌಟ್ ಆಗಿ ಸೋಲು ಅನುಭವಿಸುವಂತಾಯಿತು. ಇದರೊಂದಿಗೆ ಭಾರತ ಕೆಎಲ್ ರಾಹುಲ್ ನೇತೃತ್ವದಲ್ಲಿ ಸರಣಿಯ ಎಲ್ಲಾ ಪಂದ್ಯಗಳನ್ನೂ ಸೋತಂತಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್ ಗೂ ತಲುಪಲ್ಲ: ಪಾಕಿಸ್ತಾನ ಕ್ರಿಕೆಟಿಗನ ಭವಿಷ್ಯವಾಣಿ

ಸೂಪರ್ 8 ರ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಪ್ರಮುಖ ಬ್ಯಾಟಿಗನಿಗೇ ಕೊಕ್ ಸಿಗುತ್ತಾ

Ranji Trophy: ರಣಜಿ ಟ್ರೋಫಿ ಫೈನಲ್ ಗೇರಿದ ಕರ್ನಾಟಕ: 11 ವರ್ಷಗಳ ಬಳಿಕ ಈ ಸಾಧನೆ

ಪ್ರಸಿದ್ಧ ಕೃಷ್ಣರಿಂದಾಗಿ ರಣಜಿ ಸೆಮಿಫೈನಲ್ ನಲ್ಲಿ ಕೆಎಲ್ ರಾಹುಲ್ ಗೆ ಈ ಗತಿ ಬಂತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments