ಐತಿಹಾಸಿಕ ಪಂದ್ಯದಲ್ಲಿ ಮನೀಶ್ ಪಾಂಡೆಗೆ ಸಿಗುತ್ತಾ ಛಾನ್ಸ್!

Webdunia
ಮಂಗಳವಾರ, 13 ಫೆಬ್ರವರಿ 2018 (04:49 IST)
ಪೋರ್ಟ್ ಎಲಿಜೆಬತ್: ಕಾಮನಬಿಲ್ಲಿನ ನಾಡಿನಲ್ಲಿ ಹೊಸದೊಂದು ಇತಿಹಾಸ ರಚಿಸಲು ಸಿದ್ಧವಾಗಿರುವ ಟೀಂ ಇಂಡಿಯಾ ಇಂದು ಐದನೇ ಏಕದಿನ ಆಡಲು ಸಜ್ಜಾಗಿದೆ.
 

ಆದರೆ ಭಾರತ ತಂಡಕ್ಕೆ ಕಳೆದ ಪಂದ್ಯದಲ್ಲಿ ಮಾಡಿದ್ದ ಸ್ವಯಂಕೃತ ಅಪರಾಧಗಳನ್ನು ತಿದ್ದಿಕೊಳ್ಳುವ ಅನಿವಾರ್ಯತೆಯಿದೆ. ಫೀಲ್ಡಿಂಗ್ ಮಾಡಿದ ತಪ್ಪುಗಳು, ಬೌಲಿಂಗ್ ನಲ್ಲಿ ತೋರಿದ ಬೇಜವಾಬ್ದಾರಿತನ ತಿದ್ದಿಕೊಳ್ಳಲೇಬೇಕಿದೆ.

ಕೊಹ್ಲಿ, ಧವನ್ ಆಟದಿಂದಾಗಿ ಭಾರತ ತಂಡದ ಬ್ಯಾಟಿಂಗ್ ಹುಳುಕು ಹೆಚ್ಚಾಗಿ ಹೊರ ಬಂದಿಲ್ಲ. ಹಾಗಿದ್ದರೂ ಮಧ್ಯಮ ಕ್ರಮಾಂಕ ಇನ್ನೂ ಸಿಡಿದಿಲ್ಲ. ಅಜಿಂಕ್ಯಾ ರೆಹಾನೆ, ಹಾರ್ದಿಕ್ ಪಾಂಡ್ಯ ತಮ್ಮ ಖ್ಯಾತಿಗೆ ತಕ್ಕ ಆಟವಾಡಿಲ್ಲ. ರೋಹಿತ್ ಶರ್ಮಾ ಕೂಡಾ ಪರದಾಡುತ್ತಿದ್ದಾರೆ. ಇದರಿಂದಾಗಿ ನಿರೀಕ್ಷೆಗೆ ತಕ್ಕ ರನ್ ಸ್ಕೋರ್ ಆಗುತ್ತಿಲ್ಲ. ಹೀಗಾಗಿ ರೆಹಾನೆಗೆ ಆರಂಭಿಕ ಸ್ಥಾನಕ್ಕೆ ಬಡ್ತಿ ನೀಡಿ ಕನ್ನಡಿಗ ಮನೀಶ್ ಪಾಂಡೆಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಅವಕಾಶ ಸಿಗಬಹುದೇ ಎಂಬ ನಿರೀಕ್ಷೆ ಅಭಿಮಾನಿಗಳದ್ದು.

ಎಲ್ಲಾ ಹುಳುಕಳನ್ನು ಮೀರಿ ಇಂದು ಗೆಲ್ಲಲು ಸಾಧ್ಯವಾದರೆ ಭಾರತದ ಎದುರು ಹೊಸದೊಂದು ಇತಿಹಾಸ ತೆರೆಯಲಿದೆ. ಇದುವರೆಗೆ ಆಫ್ರಿಕಾ ನಾಡಿನಲ್ಲಿ ಮರೀಚಿಕೆಯಾಗಿದ್ದ ಸರಣಿ ಗೆಲುವು ಟೀಂ ಇಂಡಿಯಾ ಕೈ ವಶ ಮಾಡಿಕೊಳ್ಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಮುಂದಿನ ಸುದ್ದಿ
Show comments