Webdunia - Bharat's app for daily news and videos

Install App

ಇದು ನನ್ ಊರು, ನನ್ ಜಾಗ ನನ್ನನ್ನೇ ತಗೊಳಲ್ವ: ಆರ್‌ಸಿಬಿ ಪ್ರಾಂಚೈಸಿಗೆ ಬ್ಯಾಟ್‌ನಲ್ಲೇ ತಿರುಗೇಟು ಕೊಟ್ಟ ಕೆಎಲ್ ರಾಹುಲ್‌, Video viral

Sampriya
ಶುಕ್ರವಾರ, 11 ಏಪ್ರಿಲ್ 2025 (01:36 IST)
Photo Courtesy X
ಬೆಂಗಳೂರು:  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿಯನ್ನು ತನ್ನ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಮಣಿಸಿ, ಡೆಲ್ಲಿ ಕ್ಯಾಪಿಟಲ್ಸ್‌ ಗೆಲುವಿಗೆ ಪ್ರಮುಖ ಕಾರಣರಾದ ಕನ್ನಡಿಗ ಕೆಎಲ್‌ ರಾಹುಲ್ ಇದು ನನ್ನ ಗ್ರೌಂಡ್ ಎನ್ನುವ ಮೂಲಕ ಆರ್‌ಸಿಬಿ ಮ್ಯಾನೇಜ್ಮೆಂಟ್‌ಗೆ ತಿರುಗೇಟು ನೀಡಿದರು.

ಆರ್‌ಸಿಬಿ ವಿರುದ್ಧ ಇನ್ನೂ 7 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ಕಳೆದುಕೊಂಡು 164ರನ್‌ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್‌ ಗೆಲುವಿನ ನಗೆ ಬೀರಿತು. ಇಂದು ನಡೆದ ಆರ್‌ಸಿಬಿ ವಿರುದ್ಧ ಪಂದ್ಯಾಟದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ಕನ್ನಡಿಗ ಕೆಎಲ್‌ ರಾಹುಲ್ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. 53 ಎಸೆತಗಳಲ್ಲಿ 93 ರನ್ ಗಳಿಸಿ ಅಜೇಯವಾಗಿ ಉಳಿದರು.

ಇನ್ನೂ ಆರ್‌ಸಿಬಿ ವಿರುದ್ಧ ಜಯ ಗಳಿಸುತ್ತಿದ್ದ ಹಾಗೇ ಬ್ಯಾಟಿನಿಂದ ನೆಲದ ಮೇಲೆ ಸರ್ಕಲ್ ಹಾಕಿ ನೆಲಕ್ಕೆ ಬಡಿದು, ಇದು ನನ್ನ ನೆಲ, ನಾನಾಡಿದ ಗ್ರೌಂಡ್ ಎಂದು ಸನ್ನೆ ಮೂಲಕನೇ ತಿರುಗೇಟನ್ನು ನೀಡಿದ್ದಾರೆ. ಸದ್ಯ ರಾಹುಲ್ ಆಕ್ರೋಶದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹಲವು ಅವಕಾಶಗಳಿದ್ದರು ಕನ್ನಡಿಗನಾದ ಕೆಎಲ್‌ ರಾಹುಲ್ ಅವರನ್ನು ಆರ್‌ಸಿಬಿ ಪ್ರಾಂಚೈಸಿ ಖರೀದಿಸಲು ಮುಂದಾಗಲಿಲ್ಲ. ಅದಲ್ಲದೆ ರಾಹುಲ್ ಕೂಡಾ ತನಗೆ ತನ್ನ ತವರಿನ ಹೆಸರಿನಲ್ಲಿ ಆಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಇನ್ನೂ ಆರ್‌ಸಿಬಿ ಅಭಿಮಾನಿಗಳು ಪ್ರತಿ ಭಾರಿಯೂ ಕೆಎಲ್ ರಾಹುಲ್ ಅವರನ್ನು ಆರ್‌ಸಿಬಿ ಕರೆಸಿಕೊಳ್ಳುವ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ.

ಕೆಎಲ್‌ ರಾಹುಲ್ ಮೇಲೆ ಕನ್ನಡಿಗರಿಗೆ ಅಪಾರವಾದ ಪ್ರೀತಿಯಿದೆ. ಕಂಠೀರವ ಕ್ರೀಡಾಂಗಣದಲ್ಲಿ ಆಡಿ, ಇಂದು ಸ್ಟಾರ್ ಬ್ಯಾಟರ ಆಗಿರುವ ನಮ್ಮ ಮಣ್ಣಿನ ಮಗ ಆರ್‌ಸಿಬಿಗೆ ಬರಬೇಕೆಂಬುದು ಪ್ರತಿಯೊಬ್ಬ ಕನ್ನಡಿಗ ಆಸೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments