Webdunia - Bharat's app for daily news and videos

Install App

ಕೆಎಲ್ ರಾಹುಲ್ ರನ್ನು ಆರ್ ಸಿಬಿಗೆ ಕರೆತರಲು ರಂಗಕ್ಕಿಳಿದ ವಿರಾಟ್ ಕೊಹ್ಲಿ

Krishnaveni K
ಬುಧವಾರ, 14 ಆಗಸ್ಟ್ 2024 (11:44 IST)
ಬೆಂಗಳೂರು: ಐಪಿಎಲ್ 2025 ರಲ್ಲಿ ಕೆಎಲ್ ರಾಹುಲ್ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳಿವೆ. ಕೆಎಲ್ ರಾಹುಲ್ ರನ್ನು ಆರ್ ಸಿಬಿಗೆ ಕರೆಸಲು ಸ್ವತಃ ವಿರಾಟ್ ಕೊಹ್ಲಿಯೇ ರಂಗಕ್ಕಿಳಿದಿದ್ದಾರಂತೆ.

ಈ ಮೊದಲು ಕೆಎಲ್ ರಾಹುಲ್ ರನ್ನು ಆರ್ ಸಿಬಿಗೆ ಕರೆಸಿಕೊಳ್ಳಲು ಆಗ ನಾಯಕರಾಗಿದ್ದ ಕೊಹ್ಲಿಯೇ ಕಾರಣರಾಗಿದ್ದರು. ಕೊಹ್ಲಿಯ ಹೇಳಿದ ಮೇಲೆಯೇ ರಾಹುಲ್ ಅಂದು ಅಗ್ರಿಮೆಂಟ್ ಗೆ ಸಹಿ ಹಾಕಿದ್ದರಂತೆ. ಇದೀಗ ಮತ್ತೆ ಕೆಎಲ್ ರಾಹುಲ್ ರನ್ನು ತಂಡದ ನಾಯಕರಾಗಿ ಕರೆತರಲು ಕೊಹ್ಲಿಯೇ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಇದುವರೆಗೂ ಆರ್ ಸಿಬಿ ಕಪ್ ಗೆಲ್ಲಲು ಸಾಧ್ಯವಾಗಲೇ ಇಲ್ಲ. ತಾವು ನಿವೃತ್ತಿಯಾಗುವ ಮುನ್ನ ಆರ್ ಸಿಬಿ ಚಾಂಪಿಯನ್ ಆಗಬೇಕು ಎಂಬುದು ಕೊಹ್ಲಿ ಕನಸು. ಈ ಬಾರಿ ಫಾ ಡು ಪ್ಲೆಸಿಸ್ ರನ್ನು ತಂಡದ ನಾಯಕತ್ವದಿಂದ ಕಿತ್ತು ಹಾಕಲಾಗುತ್ತದೆ. ಅವರ ಸ್ಥಾನಕ್ಕೆ ಮತ್ತೊಬ್ಬ ಪ್ರಬಲ ನಾಯಕನನ್ನು ಕರೆತರಲು ಯೋಜನೆ ರೂಪಿಸಲಾಗಿದೆ.

ಕೆಎಲ್ ರಾಹುಲ್ ಗೆ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕರಾಗಿ ಕಹಿ ಅನುಭವಗಳಾಗಿವೆ. ಹೀಗಾಗಿ ಅವರು ಈ ಬಾರಿ ಲಕ್ನೋ ತೊರೆದು ಆರ್ ಸಿಬಿ ಸೇರಲಿದ್ದಾರೆ ಎಂಬ ಮಾತುಗಳಿವೆ. ಇದರ ನಡುವೆ ಸ್ವತಃ ಕೊಹ್ಲಿಯೇ ರಾಹುಲ್ ರನ್ನು ನಾಯಕರಾಗಿ ಮಾಡೋಣ ಎಂದು ಆರ್ ಸಿಬಿ ಮಾಲಿಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments