Publish Date: Tue, 22 Dec 2020 (10:07 IST)
Updated Date: Tue, 22 Dec 2020 (10:09 IST)
ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾಕ್ಕೆ ತೆರಳಿ ಕ್ರಿಕೆಟಿಗರಿಗೆ ಸಲಹೆ ನೀಡಲಿ ಎಂದು ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್ಸರ್ಕಾರ್ ಹೇಳಿದ್ದರು.
ಈ ಬಗ್ಗೆ ಐಪಿಎಲ್ ಮುಖ್ಯಸ್ಥ ರಾಜೀವ್ ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ದ್ರಾವಿಡ್ ಆಸ್ಟ್ರೇಲಿಯಾಕ್ಕೆ ತೆರಳುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ಯಾರೂ ಆಸ್ಟ್ರೇಲಿಯಾಕ್ಕೆ ಹೋಗುತ್ತಿಲ್ಲ. ನಮ್ಮ ಹುಡುಗರು ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಪಡೆದಿದ್ದರು. ದ್ವಿತೀಯ ಇನಿಂಗ್ಸ್ ನಲ್ಲಿ ಮಾತ್ರ ಎಡವಿದರು. ಹೀಗೆಲ್ಲಾ ಆಗುತ್ತಿರುತ್ತದೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮುಂದಿನ ಟೆಸ್ಟ್ ನಲ್ಲಿ ಅವರು ಪುಟಿದೇಳುತ್ತಾರೆ ನೋಡುತ್ತಿರಿ ಎಂದಿದ್ದಾರೆ.