Webdunia - Bharat's app for daily news and videos

Install App

ಡಬ್ಲ್ಯುಪಿಎಲ್ 2024: ಎಲ್ಲಿಸ್ ಪೆರ್ರಿ ಸಿಕ್ಸರ್ ಗೆ ಕಾರಿನ ಗಾಜು ಪುಡಿ ಪುಡಿ

Krishnaveni K
ಮಂಗಳವಾರ, 5 ಮಾರ್ಚ್ 2024 (09:00 IST)
Photo Courtesy: Twitter
ಬೆಂಗಳೂರು: ಡಬ್ಲ್ಯುಪಿಎಲ್ ಟೂರ್ನಿಯಲ್ಲಿ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೂಲದ ಆರ್ ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ನಿನ್ನೆ ಭರ್ಜರಿ ಬ್ಯಾಟಿಂಗ್ ನಡೆಸಿದರು.

ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಎಲ್ಲಿಸ್ ಕೇವಲ 37 ಎಸೆತ ಎದುರಿಸಿ ಅಜೇಯ 58 ರನ್ ಸಿಡಿಸಿದರು. ಈ ಇನಿಂಗ್ಸ್ ನಲ್ಲಿ 4 ಭರ್ಜರಿ ಸಿಕ್ಸರ್ ಗಳೂ ಸೇರಿತ್ತು. ರಾಜೇಶ್ವರಿ ಗಾಯಕ್ ವಾಡ್ ಎಸೆತದಲ್ಲಂತೂ ಬ್ಯಾಕ್ ಟು ಬ್ಯಾಕ್ ಸಿಕ್ಸರ್ ಗಳ ಮೂಲಕ ನೆರೆದಿದ್ದ ಸಾವಿರಾರು ಆರ್ ಸಿಬಿ ಪ್ರೇಕ್ಷಕರು ಹುಚ್ಚೆದ್ದು ಕುಣಿಯುವಂತೆ ಮಾಡಿತು.

ಸ್ಮೃತಿ ಮಂಧಾನ ಅಬ್ಬರದ ಬಳಿಕ ಎಲ್ಲಿಸ್ ಇನಿಂಗ್ಸ್ ಜವಾಬ್ಧಾರಿ ಹೊತ್ತಿದ್ದರು. ಅವರ ಸಿಡಿಲಬ್ಬರದ ಬ್ಯಾಟಿಂಗ್ ನಿಂದಾಗಿ ಆರ್ ಸಿಬಿ 198 ರನ್ ಗಳಿಸಲು ಸಾಧ‍್ಯವಾಯಿತು. ಈ ಅಬ್ಬರದ ಬ್ಯಾಟಿಂಗ್ ಹೇಗಿತ್ತೆಂದರೆ ಮೈದಾನದಲ್ಲಿ ಪ್ರದರ್ಶನಕ್ಕಿಟ್ಟಿದ್ದ ಕಾರಿನ ಗಾಜು ಪುಡಿ ಪುಡಿಯಾಯಿತು.

ತಮ್ಮ ಹೊಡೆತಕ್ಕೆ ಕಾರಿನ ಗಾಜು ಪುಡಿ ಪುಡಿಯಾಗುತ್ತಿದ್ದಂತೇ ಎಲ್ಲಿಸ್ ಕೂಡಾ ತಲೆಮೇಲೆ ಕೈ ಇಟ್ಟು ಆಘಾತ ವ್ಯಕ್ತಪಡಿಸಿದರು. ಪಂದ್ಯದ ಬಳಿಕ ಈ ಬಗ್ಗೆ ಮಾತನಾಡಿದ ಅವರು ಆ ಕಾರಿನ ಗಾಜು ಪುಡಿ ಪುಡಿಯಾದಾಗ ನನಗೆ ಸ್ವಲ್ಪ ಚಿಂತೆಯಾಯಿತು. ಅದನ್ನು ಸರಿಪಡಿಸಲು ನನಗೆ ಇಲ್ಲಿ ವಿಮೆ ಇದೆಯಾ ಎನ್ನುವುದೂ ಗೊತ್ತಿಲ್ಲ ಎಂದಿದ್ದಾರೆ.

ಇದಲ್ಲದೆ, ನಿನ್ನೆಯ ದಿನ ವೀಕೆಂಡ್ ಅಲ್ಲದೇ ಇದ್ದರೂ ಆರ್ ಸಿಬಿ ಪಂದ್ಯವಾಗಿದ್ದರಿಂದ ಮೈದಾನ ಭರ್ತಿಯಾಗಿತ್ತು. ಅದರಲ್ಲೂ ಆರ್ ಸಿಬಿ ಪ್ರೇಕ್ಷಕರು ಎಲ್ಲಿಸ್ ಪೆರಿ ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡಲು ಬರುವಾಗಲೆಲ್ಲಾ ಅವರ ಹೆಸರೆತ್ತಿ ಕೂಗಿ ಚಿಯರ್ ಮಾಡುತ್ತಿದ್ದರು. ಇಲ್ಲಿನ ಅಭಿಮಾನಿಗಳ ಬಗ್ಗೆ ಮಾತನಾಡಿರುವ ಎಲ್ಲಿಸ್ ಪೆರಿ ಇಂತಹ ಅಭಿಮಾನಿಗಳನ್ನು ನಾನು ಎಲ್ಲೂ ನೋಡಿರಲಿಲ್ಲ. ನನಗೆ ಇದು ಹೊಸ ಅನುಭವ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments