Webdunia - Bharat's app for daily news and videos

Install App

WPL 2025: ಆರ್ ಸಿಬಿಗೆ ಇಂದು ಡೆಲ್ಲಿ ಸವಾಲು, ಕರ್ನಾಟಕ ಕ್ರಶ್ ಶ್ರೇಯಾಂಕ ಮಿಸ್ಸಿಂಗ್ ಅಂತಿದ್ದಾರೆ ಫ್ಯಾನ್ಸ್

Krishnaveni K
ಸೋಮವಾರ, 17 ಫೆಬ್ರವರಿ 2025 (11:49 IST)
ವಡೋದರಾ: ಡಬ್ಲ್ಯುಪಿಎಲ್ ನಲ್ಲಿ ಮೊದಲ ಪಂದ್ಯ ಗೆದ್ದ ಆರ್ ಸಿಬಿಗೆ ಇಂದು ಎರಡನೇ ಪಂದ್ಯದಲ್ಲಿ ಪ್ರಬಲ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎದುರಾಳಿಯಾಗಿದೆ. ಆದರೆ ಆರ್ ಸಿಬಿ ಫ್ಯಾನ್ಸ್ ಈ ಬಾರಿ ಲೋಕಲ್ ಪ್ರತಿಭೆ, ಕರ್ನಾಟಕ ಕ್ರಶ್ ಶ್ರೇಯಾಂಕ ಪಾಟೀಲ್ ರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಗಾಯದಿಂದಾಗಿ ಈ ಬಾರಿ ಶ್ರೇಯಾಂಕ ಪಾಟೀಲ್ ಡಬ್ಲ್ಯುಪಿಎಲ್ ಪಂದ್ಯಾವಳಿಯ ಭಾಗವಾಗಿಲ್ಲ. ಅವರು ಬೇಗನೇ ಚೇತರಿಸಿಕೊಂಡು ತಂಡವನ್ನು ಕೂಡಿಕೊಳ್ಳಲಿ ಎಂದು ಫ್ಯಾನ್ಸ್ ಆಗ್ರಹಿಸುತ್ತಿದ್ದಾರೆ. ಯಾಕೆಂದರೆ ಶ್ರೇಯಾಂಕಗೆ ಆರ್ ಸಿಬಿಯಲ್ಲೇ ಅವರದ್ದೇ ಅಭಿಮಾನಿ ವರ್ಗದವರಿದ್ದಾರೆ.

ಇಂದಿನ ಪಂದ್ಯದ ವಿಚಾರಕ್ಕೆ ಬಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿ ಇದುವರೆಗೆ ಹೆಚ್ಚಿನ ಯಶಸ್ಸು ಪಡೆದಿಲ್ಲ ಇದುವರೆಗೆ ಆರ್ ಸಿಬಿ ಮತ್ತು ಡೆಲ್ಲಿ 5 ಪಂದ್ಯಗಳನ್ನು ಆಡಿವೆ. ಈ ಪೈಕಿ ಆರ್ ಸಿಬಿ ಗೆದ್ದಿದ್ದು ಕೇವಲ ಒಂದು ಬಾರಿ ಮಾತ್ರ. ಹೀಗಾಗಿ ಡೆಲ್ಲಿ ತಂಡವನ್ನು ಮಣಿಸುವುದು ಅಷ್ಟು ಸುಲಭವಲ್ಲ.

ಆದರೆ ಆರ್ ಸಿಬಿ ಈಗ ಮೊದಲಿನಂತಲ್ಲ. ರಿಚಾ ಘೋಷ್ ಪಂದ್ಯ ಫಿನಿಶ್ ಮಾಡುವಷ್ಟು ಪಳಗಿದ್ದಾರೆ. ಆದರೆ ಆರಂಭಿಕರಾಗಿ ಸೋಫಿ ಡಿವೈನ್ ರನ್ನು ತಂಡ ಮಿಸ್ ಮಾಡಿಕೊಳ್ಳುತ್ತಿದೆ. ಆದರೆ ಎಲ್ಲಿಸ್ ಪೆರಿ ಮತ್ತು ಸ್ಮೃತಿ ಮಂದನಾ ಮೇಲೆ ತಂಡ ಹೆಚ್ಚು ನಿರೀಕ್ಷೆಯಿಟ್ಟುಕೊಂಡಿದೆ. ಬೌಲಿಂಗ್ ನಲ್ಲೂ ರೇಣುಕಾ ಸಿಂಗ್ ಉತ್ತಮ ಓಪನಿಂಗ್ ಕೊಡುತ್ತಿದ್ದಾರೆ. ಡೆಲ್ಲಿಯಂತಹ ತಂಡವನ್ನು ಮಣಿಸಬೇಕಾದರೆ ಉಳಿದ ಬೌಲರ್ ಗಳಿಂದ ಅವರಿಗೆ ಸಾಥ್ ಸಿಗಬೇಕಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಜಿಯೋ ಹಾಟ್ ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments