Select Your Language

Notifications

webdunia
webdunia
webdunia
webdunia

ಬಿಸಿಸಿಐ ಅಧ್ಯಕ್ಷ ಗಂಗೂಲಿ ನಾಳೆ ಡಿಸ್ಚಾರ್ಜ್ ಸಾಧ್ಯತೆ

ಸೌರವ್ ಗಂಗೂಲಿ
ಕೋಲ್ಕೊತ್ತಾ: ಲಘು ಹೃದಯಾಘಾತದ ಬಳಿಕ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾದ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ನಾಳೆ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.


ಗಂಗೂಲಿ ಈಗ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ. ಗಂಗೂಲಿ ಆರೋಗ್ಯವಾಗಿದ್ದು, ಅವರಿಗೆ ಬೈಪಾಸ್ ಸರ್ಜರಿ ಅಗತ್ಯವಿಲ್ಲ ಎಂದು ವೈದ್ಯರು ತೀರ್ಮಾನಿಸಿದ್ದಾರೆ. ಹೃದಯದ ಮೂರು ರಕ್ತ ನಾಳಗಳಲ್ಲಿ ದೋಷ ಕಂಡುಬಂದಿತ್ತು. ಆ ಪೈಕಿ ಒಂದಕ್ಕೆ ಸ್ಟೆಂಟ್ ಅಳವಡಿಕೆ ಮೂಲಕ ಸರಿಪಡಿಸಲಾಗಿದೆ. ಉಳಿದ ಎರಡು ರಕ್ತನಾಳಗಳಿಗೆ ಮುಂದಿನ ದಿನಗಳಲ್ಲಿ ಆಂಜಿಯೋಪ್ಲಾಸ್ಟಿ ನಡೆಸಬೇಕಾಗಬಹುದು. ಸದ್ಯಕ್ಕೆ ಅವರಿಗೆ ಎದೆನೋವಿನ ಸಮಸ್ಯೆಯಿಲ್ಲ. ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೌರವ್ ಗಂಗೂಲಿ ಆರೋಗ್ಯದ ಬಗ್ಗೆ ಲೇಟಸ್ಟ್ ಅಪ್ ಡೇಟ್ ಕೊಟ್ಟ ಅನುರಾಗ ಠಾಕೂರ್