ಕೆಎಲ್ ರಾಹುಲ್ ಗೆ ಕಾಡುತ್ತಿದೆ ಇದೊಂದೇ ಬೇಸರ!

Webdunia
ಸೋಮವಾರ, 12 ಫೆಬ್ರವರಿ 2018 (08:31 IST)
ಬೆಂಗಳೂರು: ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವಿಫಲರಾದ ಕೆಎಲ್ ರಾಹುಲ್ ಇದೀಗ ಟಿ20 ಸರಣಿಯಲ್ಲಿ ಕಳೆದುಕೊಂಡ ಫಾರ್ಮ್ ಮರಳಿ ಗಳಿಸುವ ವಿಶ್ವಾಸದಲ್ಲಿದ್ದಾರೆ.
 

ಇದೀಗ ತವರಿನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನೇ ತಮ್ಮ ವಾಪಸಾತಿಗೆ ವೇದಿಕೆ ಮಾಡಿಕೊಂಡಿರುವ ರಾಹುಲ್ ಫಾರ್ಮ್ ಗೆ ಮರಳು ಬೆವರು ಸುರಿಸುತ್ತಿದ್ದಾರೆ. ವಿಪರ್ಯಾಸವೆಂದರೆ ಅಲ್ಲೂ ರಾಹುಲ್ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.

ಈ ಬಗ್ಗೆ ಮಾತನಾಡಿರುವ ರಾಹುಲ್ ‘ನನಗೆ ಮತ್ತೆ ಆತ್ಮವಿಶ್ವಾಸ ಮರಳಿ ಪಡೆಯಲು 150 ಪ್ಲಸ್ ರನ್ ಹೊಡೆಯಲೇಬೇಕೆಂದಿಲ್ಲ. 50 ರನ್ ಗಳಿಸಲು ಸಾಧ್ಯವಾದರೂ ಸಾಕು. ಸ್ವಲ್ಪ ಹೊತ್ತು ಕ್ರೀಸ್ ನಲ್ಲಿರಬೇಕು ಮತ್ತು ಬಾಲ್ ಸರಿಯಾಗಿ ಹಿಟ್ ಮಾಡಬೇಕು’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ವಿಫಲವಾದ ಬೇಸರ ಅವರಲ್ಲಿದೆ. ಇದೀಗ ಟಿ20 ಗೆ  ಮತ್ತೆ ಆಫ್ರಿಕಾ ವಿಮಾನವೇರಲಿದ್ದು, ಅಲ್ಲಿನ ವೇಗದ, ಬೌನ್ಸಿ ಪಿಚ್ ಗೆ ತಕ್ಕಂತೆ ಆಡಲು ಬೆವರು ಸುರಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

ಮುಂದಿನ ಸುದ್ದಿ
Show comments