Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಅವಕಾಶಕ್ಕಾಗಿ ಕಾಯುವ ಪರಿಸ್ಥಿತಿಗೆ ಮನೀಶ್ ಪಾಂಡೆಗೆ ಬೇಸರ

Webdunia
ಶುಕ್ರವಾರ, 23 ಫೆಬ್ರವರಿ 2018 (08:21 IST)
ಸೆಂಚೂರಿಯನ್: ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಪ್ರತಿಭಾವಂತರ ಗುಂಪೇ ಇದೆ. ಪ್ರತಿಭೆಯಿದ್ದೂ ಅವಕಾಶ ಸಿಗುವುದು ಅಷ್ಟು ಸುಲಭವಿಲ್ಲ. ಈ ಪರಿಸ್ಥಿತಿ ಬಗ್ಗೆ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಬೇಸರ ವ್ಯಕ್ತಪಡಿಸಿದ್ದಾರೆ.
 

ವಿಶೇಷವಾಗಿ ಈ ಸರಣಿಯಲ್ಲಿ ಅವಕಾಶಕ್ಕಾಗಿ ತುಂಬಾ ಕಾಯಬೇಕಾಯಿತು. ಅದರಲ್ಲಿ ಅಚ್ಚರಿಯೇನೂ ಇಲ್ಲ. ಭಾರತ ತಂಡಕ್ಕಾಗಿ ಆಡಲು ಸಾಕಷ್ಟು ಪ್ರತಿಭಾವಂತರ ಗುಂಪೇ ಕಾಯುತ್ತಿದೆ. ಹೀಗಾಗಿ ಈ ತಂಡಕ್ಕೆ ಆಡಲು ಅವಕಾಶ ಸಿಗುವುದು ಸುಲಭದ ಕೆಲಸವಲ್ಲ.

ಅದರಲ್ಲೂ ನಾನು 4 ಅಥವಾ 5ನೇ ಕ್ರಮಾಂಕದಲ್ಲಿ ಆಡುತ್ತೇನೆ. ಟೀಂ ಇಂಡಿಯಾ ಅಗ್ರ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಶಿಖರ್ ಧವನ್ ರಂತಹ ಆಟಗಾರರು ಬಹುಭಾಗ ಆಟ ಮುಗಿಸಿರುತ್ತಾರೆ. ಹೀಗಾಗಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಅವಕಾಶ ಸಿಗುವುದೇ ಕಡಿಮೆ. ಹಾಗಿದ್ದರೂ ನಾನು ಆಡುವ ಸ್ಥಾನದಲ್ಲಿ ಹಿಂದೆ ಯುವರಾಜ್, ಸುರೇಶ್ ರೈನಾರಂತಹ ಹಿರಿಯ ಆಟಗಾರರು ಆಡಿದ ಕ್ರಮಾಂಕ. ಅವರ ಸ್ಥಾನವನ್ನು ತುಂಬುವುದು ಸುಲಭದ ಕೆಲಸವಲ್ಲ ಎಂದು ಮನೀಶ್ ಪಂದ್ಯದ ನಂತರ ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಮುಂದಿನ ಸುದ್ದಿ
Show comments