Publish Date: Tue, 01 Dec 2020 (10:31 IST)
Updated Date: Tue, 01 Dec 2020 (10:33 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಮಾರಕ ರೋಗಗಳಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿರುವ ಮಕ್ಕಳ ನೆರವಿಗೆ ಬಂದಿದ್ದಾರೆ.
ಮಹಾರಾಷ್ಟ್ರ, ಪ.ಬಂಗಾಲ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಸುಮಾರು 100 ಮಕ್ಕಳ ಚಿಕಿತ್ಸೆಗಾಗಿ ಧನ ಸಹಾಯ ಮಾಡಿದ್ದಾರೆ. ಏಕಂ ಎಂಬ ಸಂಸ್ಥೆಯ ಜತೆ ಕೈ ಜೋಡಿಸಿರುವ ತೆಂಡುಲ್ಕರ್ ತಮ್ಮ ಕೈಲಾದ ಸಮಾಜ ಸೇವೆ ಮಾಡುತ್ತಿರುತ್ತಾರೆ. ಸರ್ಕಾರಿ ಆಸ್ಪತ್ರೆಗಳು, ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಚಿಕಿತ್ಸೆಗೆ ಸಚಿನ್ ದೇಣಿಗೆ ನೀಡಿರುವ ಹಣ ಬಳಕೆಯಾಗಲಿದೆ.