ಬಿಸಿಸಿಐ ಏನು ದೇವರಿಗಿಂತ ದೊಡ್ಡದಾ? ಸಿಟ್ಟಿಗೆದ್ದ ಶ್ರೀಶಾಂತ್

Webdunia
ಶನಿವಾರ, 12 ಆಗಸ್ಟ್ 2017 (09:50 IST)
ಕೊಚ್ಚಿ: ಕೇರಳ ಮೂಲದ ಕ್ರಿಕೆಟಿಗ ಎಸ್. ಶ್ರೀಶಾಂತ್ ಮೇಲಿನ ನಿಷೇಧ ಶಿಕ್ಷೆ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಬಿಸಿಸಿಐಗೆ ಆದೇಶಿಸಿದರೂ ಕ್ಯಾರೇ ಎನ್ನದ ಕ್ರಿಕೆಟ್ ದೊರೆಗಳ ಮೇಲೆ ಸಿಟ್ಟಿಗೆದ್ದಿದ್ದಾರೆ.


ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತರಾಗಿರುವ ಶ್ರೀಶಾಂತ್ ಗೆ ಮತ್ತೆ ಕ್ರಿಕೆಟ್ ಆಡಲು ಅವಕಾಶ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಆದರೆ ಆಡಲು ಅವಕಾಶ ಮಾಡಿಕೊಡುವ ಬದಲು ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಬಿಸಿಸಿಐ ತೀರ್ಮಾನಿಸಿದೆ. ಇದು ಶ್ರೀಶಾಂತ್ ರನ್ನು ಸಿಟ್ಟಿಗೆಬ್ಬಿಸಿದೆ.

ಸರಣಿ ಟ್ವೀಟ್ ಮಾಡಿರುವ ಅವರು ಬಿಸಿಸಿಐ ಎಂದರೆ ದೇವರಿಗಿಂತಲೂ ದೊಡ್ಡದಾ ಎಂದು ಕ್ರುದ್ಧರಾಗಿ ಕೇಳಿದ್ದಾರೆ. ‘ಬಿಸಿಸಿಐ ಭ್ರಷ್ಟಾಚಾರ, ಮ್ಯಾಚ್ ಫಿಕ್ಸಿಂಗ್ ನ್ನು ಎಂದಿಗೂ ಸಹಿಸುವುದಿಲ್ಲ ಎನ್ನುವುದನ್ನು ಒಪ್ಪಿಕೊಳ್ಳೋಣ. ಹಾಗಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮತ್ತೆ ಅವಕಾಶ ಮಾಡಿಕೊಡುತ್ತಿರುವುದೇಕೆ?

ಒಬ್ಬರಿಗೆ ಎಷ್ಟು ಕೆಡುಕು ಮಾಡಬಹುದೋ ಅದಕ್ಕಿಂತ ಹೆಚ್ಚು ಬಿಸಿಸಿಐ ಮಾಡುತ್ತಿದೆ. ನನ್ನ ಅಮಾಯಕತೆ ಮತ್ತೆ ಮತ್ತೆ ಸಾಬೀತಾದ ಮೇಲೂ ಈ ರೀತಿ ದೌರ್ಜನ್ಯವೆಸಗುತ್ತಿರುವುದೇಕೆ? ಎಂದು ಸಿಟ್ಟಿಗೆದ್ದಿರುವ ಶ್ರೀಶಾಂತ್ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ… ಅಭಿನವ್ ಮುಕುಂದ್ ರ ವರ್ಣಬೇಧ ಆರೋಪಕ್ಕೆ ನಾಯಕ ಕೊಹ್ಲಿ ಪ್ರತಿಕ್ರಿಯೆ ಏನು ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನನ್ ಅಭಿಮಾನಿಗೆ ಏನೂ ಮಾಡ್ಬೇಡಿ: ಸಿಬ್ಬಂದಿಗೆ ಹಾರ್ದಿಕ್ ಪಾಂಡ್ಯ ರಿಕ್ವೆಸ್ಟ್ Video

ಜಿಮ್ ಮಾಡಿಲ್ಲಾಂತ ಎದುರಾಳಿ ಬೌಲರ್ ಮೇಲೇ ಮಲಗೋದಾ: ಹಾರ್ದಿಕ್ ಪಾಂಡ್ಯ ಫನ್ನಿ ವಿಡಿಯೋ

T20 WorldCup: ನಮೀಬಿಯಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಭಾರತಕ್ಕೆ ವಾಪಸ್ ಬಂದ ವಿರಾಟ್ ಕೊಹ್ಲಿ: ತಾವೇ ಕರೆದು ಫ್ಯಾನ್ಸ್ ಗೆ ಪೋಸ್ ಕೊಟ್ರು video

ಮಹಿಳಾ ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ ಭಾರತ ವರ್ಸಸ್ ಆಸ್ಟ್ರೇಲಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments