ಸಚಿವ ಸಂಪುಟ ಸಭೆ : ಪ್ರಮುಖ ವಿಚಾರಗಳೇನು..?

Webdunia
ಗುರುವಾರ, 15 ಜುಲೈ 2021 (11:51 IST)
ಬೆಂಗಳೂರು (ಜು.15):  ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು,  ಈ ಸಮಾವೇಶದ ಬಗ್ಗೆ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. 

ಈ ಕುರಿತು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ  ನಿರ್ಧಾರ ಸಾಧ್ಯತೆ ಇದೆ.  ಅಲ್ಲದೇ ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡುವುದು. ರಾಜ್ಯದಲ್ಲಿ 2021-22 ನೇ ಸಾಲಿನ ಬೆಳೆ ಸಮೀಕ್ಷೆಯ ಯೋಜನೆ ಜಾರಿ ಕುರಿತು ಚರ್ಚೆ ನಡೆಯಲಿದೆ.
•             ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ವಿಚಾರ
•             ಫೆಬ್ರವರಿಯಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ಚಿಂತನೆ
•             ಈ ಸಮಾವೇಶದ ಬಗ್ಗೆ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ

ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ತೆರೆಯಲು ಸಂಪುಟದ ಅನುಮತಿ ನೀಡುವ ಕುರಿತು ನಾಯಕರು ಚರ್ಚಿಸಲಿದ್ದಾರೆ.
ಇನ್ನು ಜೆಒಸಿ ಕೋರ್ಸ್ಗಳನ್ನು ಪಿಯುಸಿ ತತ್ಸಮಾನ ಎಂದು ಪರಿಗಣಿಸುವುದು.  ಜೀವಾವಧಿ ಶಿಕ್ಷೆಗೆ ಒಳಗಾಗಿರುವ 108 ಅಪರಾಧಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡುವುದು. ಕರ್ನಾಟಕ ಕಾರಾಗೃಹ ಅಭಿವೃದ್ಧಿ  ಮಂಡಳಿ ಮಾಡುವ ಕುರಿತು ಸಂಪುಟದಲ್ಲಿ ಚರ್ಚೆ ನಡೆಯಲಿದೆ.
ವರಿಷ್ಠರ ಭೇಟಿಗೆ ನಾಳೆ ಸಿಎಂ ಬಿಎಸ್ವೈ ದಿಲ್ಲಿಗೆ!
ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ನಿರ್ವಹಣೆಗೆ ಹೊಟೇಲ್ ಆಪರೇಟರನ್ನು ಆಯ್ಕೆ ಮಾಡುವ ಕುರಿತು,  ಕೊಪ್ಪಳ, ಹಾವೇರಿ ಹಾಗೂ ದಕ್ಷಿಣ ಕನ್ನಡ  ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ವಿವಿಧ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.
ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸುವ ಕುರಿತಂತೆಯೂ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆ ಇದೆ. ಇಂದು ನಡೆಯುವ ಸಂಪುಟದಲ್ಲಿ ಈ ಎಲ್ಲಾ ವಿಚಾರಗಳು ಪ್ರಮುಖ ಚರ್ಚಾ ವಿಷಯಗಳಾಗುವ ಸಾಧ್ಯತೆಗಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಂಸತ್ ನಲ್ಲಿ ನೀಟ್ ಅಕ್ರಮ ಚರ್ಚೆ ಮಾಡಲು ನೋಟಿಸ್ ಕೂಡಾ ಕೊಡದೇ ಪ್ರತಿಭಟನೆ ಮಾಡ್ತಿದ್ದಾರೆ: ಜಿತೇಂದ್ರ ಸಿಂಗ್

ಸಿಜೆಪಿ ಪ್ರತಿಭಟನೆ ವೇಳೆ ತಲ್ವಾರ್ ಝಳಪಿಸಿದ್ರಾ: ವೈರಲ್ ವಿಡಿಯೋದಲ್ಲಿ ಏನಿದೆ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments