Webdunia - Bharat's app for daily news and videos

Install App

ಖಾಯಿಲೆ ಬರದೇ ಇರಬೇಕಾದರೆ ಇದೊಂದು ಕೆಲಸ ಮಾಡಿ ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್

Krishnaveni K
ಸೋಮವಾರ, 27 ಅಕ್ಟೋಬರ್ 2025 (10:45 IST)
ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಪ್ರಕಾರ ಭಾರತೀಯರಲ್ಲಿ ಖಾಯಿಲೆ ಹೆಚ್ಚಾಗಲು ಸೋಮಾರಿತನವೇ ಕಾರಣ. ಹೀಗಾಗಿ ಖಾಯಿಲೆಗಳು ಬಾರದಂತೆ ತಡೆಯಲು ಇದೊಂದು ಕೆಲಸ ಮಾಡಿ ಎನ್ನುತ್ತಾರೆ ಅವರು.

ಸಂವಾದವೊಂದರಲ್ಲಿ ಅವರು ಇದರ ಬಗ್ಗೆ ಮಾತನಾಡಿದ್ದರು. ಇತ್ತೀಚೆಗಿನ ದಿನಗಳಲ್ಲಿ ಭಾರತೀಯರಲ್ಲಿ ಚಿಕ್ಕವಯಸ್ಸಿನಲ್ಲೇ ಗಂಭೀರ ಖಾಯಿಲೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಮುಖ್ಯ ಕಾರಣವೇ ಸೋಮಾರಿತನ ಹೆಚ್ಚುತ್ತಿರುವುದು ಎಂದಿದ್ದಾರೆ.

ಒಂದು ಅಧ್ಯಯನದ ಪ್ರಕಾರ ನಮ್ಮಲ್ಲಿ ಶೇ.51 ರಷ್ಟು ಸೋಮಾರಿತನವಿದೆ. ಇದುವೇ ಎಲ್ಲಾ ಖಾಯಿಲೆಗಳಿಗೆ ಮೂಲ. ನೀವು ಗಮನಿಸಿರಬಹುದು, ಈ ಹಿಂದೆ ನಮ್ಮಲ್ಲಿ ಸೈಕ್ಲಿಂಗ್ ಮಾಡುವವರ ಸಂಖ್ಯೆ ಹೆಚ್ಚಿತ್ತು. ಆದರೆ ಈಗ ರಸ್ತೆಗಳಲ್ಲಿ ಸೈಕಲ್ ಗಳೇ ಕಾಣಲ್ಲ. ಎಲ್ಲರೂ ಬೈಕ್, ಕಾರು ಆಯ್ಕೆ ಮಾಡಿಕೊಂಡಿದ್ದಾರೆ.

ಇನ್ನು, ಬಹುಮಹಡಿ ಕಟ್ಟಡಗಳಲ್ಲಿ ಕೆಲಸ ಮಾಡುವವರು ಮೆಟ್ಟಿಲು ಹತ್ತುವ ಬದಲು ಲಿಫ್ಟ್ ಬಳಸುತ್ತಿದ್ದಾರೆ. ಇದರಿಂದ ಮನುಷ್ಯರಿಗೆ ಎರಡು ರೀತಿಯ ಪರಿಣಾಮಗಳಿವೆ. ಒಂದು ಆತನಿಗೆ ಚಟುವಟಿಕೆ ಕಡಿಮೆಯಾಗಿದೆ. ಇದರಿಂದ ಖಾಯಿಲೆಗಳು ಹೆಚ್ಚಾಗಿವೆ. ಇನ್ನೊಂದು ನೀವು ಹತ್ತಿ ಇಳಿಯುವ ಕೆಲಸ ಮಾಡುವಾಗ ನಿಮಗೆ ಹೃದಯದ ಸಮಸ್ಯೆಗಳಿವೆಯಾ ಎಂದೂ ಗೊತ್ತಾಗುತ್ತದೆ. ಹೀಗಾಗಿ ಸೋಮಾರಿತನದಿಂದಲೇ ನಮ್ಮ ಆರೋಗ್ಯ ಕಳೆದುಕೊಳ್ಳುತ್ತಿದ್ದೇವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments