ಜಾಮೀನು ಪ್ರತಿಗಾಗಿ ಕಾಯದೆ ಫಟಾಫಟ್ ಬಿಡುಗಡೆ

Webdunia
ಶನಿವಾರ, 17 ಜುಲೈ 2021 (11:02 IST)
ನವದೆಹಲಿ (ಜು.17):  ಅಪರಾಧ ಪ್ರಕರಣಗಳಲ್ಲಿ ಜೈಲು ಸೇರುವ ಆರೋಪಿಗಳಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ದೊರೆತರೂ ಆದೇಶದ ಪ್ರತಿಯು ಜೈಲಧಿಕಾರಿಗಳಿಗೆ ಸಿಗುವುದು ತಡವಾಗುವ ಕಾರಣ ಬಿಡುಗಡೆ ವಿಳಂಬವಾಗುವುದನ್ನು ತಪ್ಪಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.

•ಅಪರಾಧ ಪ್ರಕರಣಗಳಲ್ಲಿ ಜೈಲು ಸೇರುವ ಆರೋಪಿಗಳಿಗೆ ಸುಪ್ರೀಂಕೋರ್ಟ್ನಿಂದ ಡಿಜಿಟಲ್ ಜಾಮೀನು
•ಬಿಡುಗಡೆ ವಿಳಂಬವಾಗುವುದನ್ನು ತಪ್ಪಿಸಲು ಸುಪ್ರೀಂಕೋರ್ಟ್ ಕ್ರಮ

ಈ ಸಂಬಂಧ ಜೈಲಧಿಕಾರಿಗಳಿಗೆ ಜಾಮೀನು ಆದೇಶದ ಪ್ರತಿಯನ್ನು ಡಿಜಿಟಲ್ ರೂಪದಲ್ಲಿ ರವಾನಿಸುವ ವ್ಯವಸ್ಥೆಯನ್ನು ತಿಂಗಳೊಳಗೆ ಜಾರಿಗೆ ತರಲು ಸುಪ್ರೀಂಕೋರ್ಟ್ನ ಸೆಕ್ರೆಟರಿ ಜನರಲ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠ ಆದೇಶ ನೀಡಿದೆ. ಈ ಆದೇಶ ಜಾರಿಗೆ ಬಂದ ನಂತರ ಜೈಲಧಿಕಾರಿಗಳಿಗೆ ಇಂಟರ್ನೆಟ್ ಮುಖಾಂತರ ಡಿಜಿಟಲ್ ರೂಪದಲ್ಲಿ ಜಾಮೀನು ಆದೇಶದ ಪ್ರತಿ ಲಭಿಸಲಿದ್ದು, ತಕ್ಷಣ ಆರೋಪಿಗಳನ್ನು ಬಿಡುಗಡೆ ಮಾಡಬಹುದಾಗಿದೆ.
ದೇಶದ್ರೋಹ ಕಾಯ್ದೆ ಬಗ್ಗೆ ಸುಪ್ರೀಂ ಕೋರ್ಟ್ ಗರಂ!
ಈ ಆದೇಶ ನೀಡುವ ವೇಳೆ ಮಹತ್ವದ ಅಭಿಪ್ರಾಯ ಪ್ರಕಟಿಸಿರುವ ನ್ಯಾ. ರಮಣ, ‘ಈ ಡಿಜಿಟಲ್ ಯುಗದಲ್ಲಿ ನಾವು ಇನ್ನೂ ಪಾರಿವಾಳದ ಮೂಲಕ ಪತ್ರ ಸಾಗಿಸುತ್ತಿದ್ದೇವೆ’ ಎಂದು ಕಿಡಿಕಾರಿದ್ದಾರೆ.
ಜಾಮೀನು ಆದೇಶವನ್ನು ಡಿಜಿಟಲ್ ರೂಪದಲ್ಲಿ ರವಾನಿಸಲು ಎಲ್ಲಾ ಜೈಲುಗಳಲ್ಲೂ ಇಂಟರ್ನೆಟ್ ಸಂಪರ್ಕ ಇದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅಲ್ಲದೆ ಈ ವಿಷಯದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ಹಿರಿಯ ವಕೀಲ ದುಷ್ಯಂತ ದವೆ ಅವರನ್ನು ನೇಮಿಸಿದೆ. ಈ ವಿಷಯವನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬೇಕು ಎಂದು ಈ ಒಂದು ಕಾರಣ ಕೊಟ್ಟ ಪರಮೇಶ್ವರ್

ಮಮತಾ ಬ್ಯಾನರ್ಜಿ ಗೆದ್ದ ಮೇಲೆ ಮೋದಿಗೆ ಹಸಿರು ರಸಗುಲ್ಲಾ ಕೊಡ್ತೀವಿ ಎಂದ ಮಹಿಳೆ Video

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸರಕಾರ: ಧರ್ಮೇಂದ್ರ ಪ್ರಧಾನ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಊಟ ಮಾಡಿದ್ಯಾ... ಮಾವುತ ಮತ್ತು ಆನೆಯ ನಡುವಿನ ಹೃದಯಸ್ಪರ್ಶಿ ಮಾತುಕತೆ Video

ಮುಂದಿನ ಸುದ್ದಿ
Show comments