Webdunia - Bharat's app for daily news and videos

Install App

ಆರ್ ಟಿಐ ಮೂಲಕ ಮಾಹಿತಿ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ

Krishnaveni K
ಶನಿವಾರ, 7 ಸೆಪ್ಟಂಬರ್ 2024 (11:16 IST)
ಬೆಂಗಳೂರು: ಆರ್ ಟಿಐ ಅಥವಾ ಮಾಹಿತಿ ಹಕ್ಕು ಕಾಯಿದೆ 2005 ರ ಪ್ರಕಾರ ಸರ್ಕಾರದ ದಾಖಲೆಗಳ ಬಗ್ಗೆ ನಾವು ಮಾಹಿತಿ ಪಡೆಯಲು ಹಕ್ಕುದಾರರಾಗಿರುತ್ತೇವೆ. ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಶುಲ್ಕವೆಷ್ಟು ಎಂಬಿತ್ಯಾದಿ ಮಾಹಿತಿ ಇಲ್ಲಿದೆ ನೋಡಿ.

2005 ರ ಅಕ್ಟೋಬರ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ ಹಕ್ಕು ಕಾಯಿದೆ ಜಾರಿಗೆ ತಂದಿತ್ತು. ಸರ್ಕಾರಿ ಸಂಸ್ಥೆಗಳಲ್ಲಿ ಪಾರದರ್ಶಕತೆ ತರುವುದು ಈ ಕಾಯಿದೆಯ ಉದ್ದೇಶವಾಗಿದೆ. ಇದರನ್ವಯ ಸಾಮಾನ್ಯ ನಾಗರಿಕರು ಸರ್ಕಾರದ ಯೋಜನೆ ಯಾವ ಹಂತ ತಲುಪಿದೆ, ಸರ್ಕಾರದ ಖರ್ಚು ವೆಚ್ಚ, ಯೋಜನೆಗಳ ವಿವರ ಇತ್ಯಾದಿಗಳನ್ನು ಅರ್ಜಿ ಸಲ್ಲಿಸಿ ವಿವರ ಪಡೆಯಬಹುದಾಗಿದೆ.

ಯಾವೆಲ್ಲಾ ಮಾಹಿತಿಗಳು ಸಿಗುತ್ತದೆ?
ಸರ್ಕಾರದಿಂದ ಮಾಹಿತ ಅಥವಾ ಕಾಮಗಾರಿಗೆ ಸಂಬಂಧಿಸಿದ ಖರ್ಚು ವೆಚ್ಚ ಇತ್ಯಾದಿ ವಿವರಗಳು, ಸರ್ಕಾರ ಹೊರಡಿಸಿದ ಜಿಒಗಳ ನಕಲು ಪ್ರತಿ ಕೇಳಬಹುದು, ಸರ್ಕಾರಿ ದಾಖಲೆಗಳ ಪರಿಶೀಲನೆಗೆ ಅವಕಾಶವಿದೆ, ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ಯಾವುದೇ ಕಾಮಗಾರಿಗಳ ನಿರ್ಮಾಣ, ಅದರ ಖರ್ಚು ವೆಚ್ಚಗಳ ವಿವರಗಳನ್ನು ಈ ಹಕ್ಕಿನಡಿ ಕೇಳಬಹುದಾಗಿದೆ. ಅರ್ಜಿ ಸಲ್ಲಿಸಿದ 30 ದಿನಗಳೊಳಗಾಗಿ ನಿಮಗೆ ಮಾಹಿತಿ ನೀಡಬೇಕಾಗುತ್ತದೆ. ಆದರೆ ದೇಶದ ಭದ್ರತೆ, ಗೌಪ್ಯತೆ ಕುರಿತಾದ ಕೆಲವೊಂದು ವಿಚಾರಗಳ ಬಗ್ಗೆ ಮಾಹಿತಿ ಕೇಳುವಂತಿಲ್ಲ.

ಆರ್ ಟಿಐ ಅಡಿ ಅರ್ಜಿ ಸಲ್ಲಿಸಲು ಪ್ರತೀ ಅರ್ಜಿಗೆ 10 ರೂ. ಶುಲ್ಕ ನೀಡಬೇಕು. ರಾಜ್ಯ ಅಥವಾ ಕೇಂದ್ರ ಸರ್ಕಾರದ ವಿವರಗಳಿಗೆ ಪ್ರತೀ ಪುಟಕ್ಕೆ 2 ರೂ.ನಂತೆ ಶುಲ್ಕ ಪಾವತಿಸಬೇಕು.

ಎಲ್ಲಿ ಅರ್ಜಿ ಸಲ್ಲಿಸಬೇಕು?
ಆರ್ ಟಿಐ ಅರ್ಜಿಯನ್ನು ಅಂಚೆ ಕಚೇರಿಯಲ್ಲಿ ಪಡೆದು ಆರ್ ಟಿಐ ಕೌಂಟರ್ ನಲ್ಲಿ ನೀಡಬಹುದು ಅಥವಾ ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು https://rtionline.gov.in ಎಂಬ ವಿಳಾಸಕ್ಕೆ ಲಾಗಿನ್ ಆಗಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments