Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಏರಿಕೆಯಾಗಿದೆ ಎಳೆನೀರಿನ ಬೆಲೆ: ಕಾರಣ ಇಲ್ಲಿದೆ

Krishnaveni K
ಶನಿವಾರ, 28 ಸೆಪ್ಟಂಬರ್ 2024 (11:19 IST)
ಬೆಂಗಳೂರು: ಇದು ಮಳೆಗಾಲವಾಗಿದ್ದರೂ ತೀವ್ರ ಬಿಸಿಲಿನಿಂದಾಗಿ ಬೆಂಗಳೂರಿಗರು ದಾಹ ತಣಿಸಲು ಜ್ಯೂಸ್ ಸೆಂಟರ್, ಎಳೆನೀರನ್ನು ಹುಡುಕಿಕೊಂಡು ಹೋಗುವಂತಾಗಿದೆ. ಆದರೆ ಎಳೆನೀರು ಕುಡಿಯಲು ಹೊರಟವರಿಗೆ ಈಗ ಶಾಕ್ ಎದುರಾಗಿದೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಹಲವೆಡೆ ಎಳೆನೀರಿನ ದರದಲ್ಲಿ ಭಾರೀ ಏರಿಕೆಯಾಗಿದೆ. ಮೊದಲು 35-40 ರೂ. ಮಾರಾಟವಾಗುತ್ತಿದ್ದ ಎಳೆ ನೀರಿಗೆ ಈಗ 60 ರೂ.ವರೆಗೆ ತಲುಪಿದೆ. ಬರೀ ನೀರು ಇರುವ ಎಳೆನೀರಿಗೆ 35, ಗಂಜಿ ಇರುವುದಕ್ಕೆ 40-45 ರೂ.ಗಳಿಗೆ ಮಾರಾಟವಾಗುತ್ತಿತ್ತು.

ಈಗ ಅದೇ ಮಳಿಗೆಯಲ್ಲಿ ಬರೀ ನೀರು ಇರುವ ಎಳೆ ನೀರಿಗೇ 60 ರೂ. ದರ ವಸೂಲಿ ಮಾಡಲಾಗುತ್ತಿದೆ. ಹಾಗಂತ ಈ ದರ ರೈತನಿಗೆ ಸೇರಬಹುದು ಎಂದು ನೀವಂದುಕೊಂಡರೆ ತಪ್ಪಾಗುತ್ತದೆ. ಇದು ಮಧ್ಯವರ್ತಿಗಳ ಪಾಲಾಗುತ್ತಿದೆ ಎಂದರೂ ತಪ್ಪಾಗಲಾರದು.  ಈ ಬಗ್ಗೆ ಎಳೆನೀರಿನ ಅಂಗಡಿಯೊಂದರ ಮಾಲಿಕರನ್ನು ಮಾತನಾಡಿಸಿದಾಗ ಅವರು ಹೇಳಿದ್ದಿಷ್ಟು.

‘ಕೆಲವು ದಿನಗಳಿಂದ ಎಳೆ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಆದರೆ ಸಾಕಷ್ಟು ಪ್ರಮಾಣದಲ್ಲಿ ಕಾಯಿ ಬರುತ್ತಿಲ್ಲ. ಅದರಲ್ಲೂ ಮೊದಲಿನಂತೆ ಗಂಜಿ, ದಪ್ಪ ಗಂಜಿ ಎಂದೆಲ್ಲಾ ವೆರೈಟಿ ಸಿಗುವುದು ಕಷ್ಟವಾಗಿದೆ. ವಾರಕ್ಕೆ ಎರಡು ಮೂರು ದಿನ ಲೋಡ್ ಬರ್ತಾ ಇತ್ತು. ಆದರೆ ಈಗ ಕಾಯಿ ಬರೋದೇ ಕಡಿಮೆಯಾಗಿದೆ. ಅದಕ್ಕೇ ದರ ಏರಿಕೆ ಮಾಡಿದ್ದೇವೆ’ ಎನ್ನುತ್ತಿದ್ದಾರೆ. ಬೇಸಿಗೆಯಲ್ಲಿ ಎಳೆನೀರಿನ ಬೆಲೆ ಬೇಡಿಕೆ ಹೆಚ್ಚಾಗಿದ್ದರಿಂದ ಏರಿಕೆಯಾಗಿತ್ತು. ಆದರೆ ಈಗ ಕಾಯಿ ಬರುತ್ತಿಲ್ಲ ಎಂಬ ಕಾರಣಕ್ಕೆ ಅದನ್ನೂ ಮೀರಿದ ದರ ನಿಗದಿಯಾಗಿದೆ. ಹೀಗಾಗಿ ಸದ್ಯಕ್ಕೆ ಎಳೆ ನೀರು ಕುಡಿಯಲೂ ಹಿಂದೆ-ಮುಂದೆ ನೋಡುವ ಪರಿಸ್ಥಿತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments