Webdunia - Bharat's app for daily news and videos

Install App

ವೈದ್ಯಕೀಯ ಕಾಲೇಜಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಸೊನ್ನೆ!

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆಯುವ ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ 2017ರಲ್ಲಿ 5 ವಿದ್ಯಾರ್ಥಿಗಳು, 2018ರಲ್ಲಿ 7 ಹಾಗೂ 2019ರಲ್ಲಿ ಒಬ್ಬರೂ ಇಲ್ಲ

Webdunia
ಭಾನುವಾರ, 11 ಜುಲೈ 2021 (21:04 IST)
ತಮಿಳುನಾಡು : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಿಂದ ತಮಿಳುನಾಡಿನ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿರುವುದು ಚಿಂತೆಗೀಡು ಮಾಡುವ ವಿಷಯವಾಗಿದ್ದು, ಈ ಸಮಸ್ಯೆ ಬಗೆಹರಿಸುವ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ ಎಂದು ಮದ್ರಾಸ್ ಹೈಕೋರ್ಟ್ ಮುಂದೆ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) - ಸಿಪಿಐ(ಎಂ) ಹೇಳಿಕೆ ಸಲ್ಲಿಸಿದೆ.


ನೀಟ್ ಬರುವುದಕ್ಕೂ ಮುಂಚೆ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿದ್ದ ವಿದ್ಯಾರ್ಥಿಗಳಲ್ಲಿ ಶೇ.90 ಮಂದಿ ರಾಜ್ಯ ಪಠ್ಯಕ್ರಮವನ್ನು ಬೋಧಿಸುತ್ತಿದ್ದ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಅಥವಾ ಕಡಿಮೆ ವೆಚ್ಚದ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಾಗಿರುತ್ತಿದ್ದರು. ಆದರೆ, ನೀಟ್ ಬಂದ ಮೇಲೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆಯುವ ಸರ್ಕಾರಿ ಶಾಲೆಗಳ ಮಕ್ಕಳ ಸಂಖ್ಯೆ 2017ರಲ್ಲಿ 5  ವಿದ್ಯಾರ್ಥಿಗಳು, 2018ರಲ್ಲಿ 7 ಹಾಗೂ 2019ರಲ್ಲಿ ಒಬ್ಬರೂ ಇಲ್ಲ ಎಂದು ಸಿಪಿಐ (ಎಂ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮುಂದುವರೆದು, ನೀಟ್ ಅನ್ನು ಪರಿಚಯಿಸಿದ ನಂತರ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಸೀಟುಗಳನ್ನು ಪಡೆಯುವ ಸರ್ಕಾರಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂದೂ ಸಿಪಿಐ(ಎಂ) ಹೇಳಿದೆ.
ಆಡಳಿತಾರೂಢ ಡಿಎಂಕೆ ಸರ್ಕಾರವು ಸಾಮಾಜಿಕವಾಗಿ ವಂಚಿತರಾಗಿರುವ ವಿದ್ಯಾರ್ಥಿಗಳ ಮೇಲೆ ನೀಟ್ ಪರೀಕ್ಷೆಯು ಬೀರಿರುವ ಪರಿಣಾಮವನ್ನು ಅಧ್ಯಯನ ಮಾಡಲು ಒಂಭತ್ತು ಸದಸ್ಯರ ಸಮಿತಿಯನ್ನು ರಚಿಸಿದ್ದನ್ನು ಪ್ರಶ್ನಿಸಿ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕರು ನಾಗರಾಜನ್ ಅವರು ಅರ್ಜಿಯೊಂದನ್ನು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಮಧ್ಯಪ್ರವೇಶ ಕೋರಿ ಸಿಪಿಐ(ಎಂ) ಅರ್ಜಿ ಸಲ್ಲಿಸಿದೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಾಲಕೃಷ್ಣನ್ ಅವರ ಮೂಲಕ ಸಿಪಿಐ(ಎಂ) ಸಲ್ಲಿಸಿರುವ ಅರ್ಜಿಯಲ್ಲಿ ಕರು ನಾಗರಾಜನ್ ಅವರ ಅರ್ಜಿಯು ಅಕಾಲಿಕವಾಗಿದ್ದು ವಜಾಗೊಳಿಸಲು ಯೋಗ್ಯವಾಗಿದೆ ಎನ್ನಲಾಗಿದೆ. ಈ ಕೆಳಗಿನ ಅಂಶಗಳನ್ನು ಅರ್ಜಿಯಲ್ಲಿ ದಾಖಲಿಸಲಾಗಿದೆ:

2016ರಲ್ಲಿ ತಮಿಳು ಮಾಧ್ಯಮ ಶಾಲೆಗಳಿಂದ ವೈದ್ಯಕೀಯ ಕೋರ್ಸ್ಗಳಿಗೆ ಸೇರಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 600 ಇತ್ತು. ಆದರೆ ಈಗ ಶೂನ್ಯಕ್ಕೆ ಇಳಿದಿದೆ.
ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳು ಸಹ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಆಗುತ್ತಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಮೂರು ವರ್ಷದ ಹಿಂದೆ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡು ಪ್ರಾಣತೆತ್ತ ಪ್ರತಿಭಾವಂತ ವಿದ್ಯಾರ್ಥಿನಿ ಅನಿತಾ ಅವರ ಉದಾಹರಣೆಯನ್ನು ಉಲ್ಲೇಖಿಸಲಾಗಿದೆ. ಮತ್ತೊಂದು ಉದಾಹರಣೆಯಲ್ಲಿ, 2018ರಲ್ಲಿ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಮತ್ತೋರ್ವ ಪ್ರತಿಭಾವಂತ ವಿದ್ಯಾರ್ಥಿನಿ ಪ್ರದೀಪಾ ಅವರ ಬಗ್ಗೆ ಉಲ್ಲೇಖಿಸಲಾಗಿದೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು 2018-19ರಲ್ಲಿ ಕೈಗೊಂಡಿದ್ದ ಅಖಿಲ ಭಾರತೀಯ ಉನ್ನತ ಶಿಕ್ಷಣ ಸಮೀಕ್ಷೆಯಡಿ (ಎಐಎಸ್ಎಚ್ಇ) ತಮಿಳುನಾಡಿನಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾಗುವ ಪ್ರಮಾಣ ಶೇ.51.4 ಇದ್ದು ದೇಶದ ಸರಾಸರಿಯಾದ ಶೇ.27.1ಕ್ಕಿಂತ ಸಾಕಷ್ಟು ಹೆಚ್ಚು. ಉನ್ನತ ಶಿಕ್ಷಣ ಪಡೆಯಲು ದಾಖಲಾಗುವ ವಿದ್ಯಾರ್ಥಿನಿಯರ ಪ್ರಮಾಣ ಶೇ.48.3, ಪರಿಶಿಷ್ಟ ಜಾತಿಯಲ್ಲಿ ಈ ಪ್ರಮಾಣ ಶೇ.41.6 ಹಾಗೂ ಪರಿಶಿಷ್ಟ ಪಂಗಡದಲ್ಲಿ ಇದೇ ಪ್ರಮಾಣ ಶೇ.37.8 ಆಗಿದೆ. ಪರಿಸ್ಥಿತಿ ಹೀಗಿರುವಾಗ, ಇದ್ದಕ್ಕಿದ್ದಂತೆ ತಮಿಳುನಾಡು ವಿದ್ಯಾರ್ಥಿಗಳ ಸಂಖ್ಯೆ ಉನ್ನತ ಶಿಕ್ಷಣದಲ್ಲಿ ಇಳಿಕೆಯಾಗುವುದು ಗಂಭೀರ ಚಿಂತೆಯ ವಿಷಯವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments