Publish Date: Mon, 08 Apr 2019 (17:50 IST)
Updated Date: Mon, 08 Apr 2019 (17:53 IST)
ಮಾಜಿ ಸಿಎಂ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡರ ಪರ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪ್ರಚಾರ ನಡೆಸಿದ್ದಾರೆ.
ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಬಳಿ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.
ಬಚ್ಚೇಗೌಡರ ಪರ ಎಸ್.ಎಂ. ಕೃಷ್ಣ ಭರ್ಜರಿ ಪ್ರಚಾರ ನಡೆಸಿದ್ರು. ಕೃಷ್ಣ ಗೆ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಸಾಥ್ ನೀಡಿದ್ರು. ಆವತಿ ಶಕ್ತಿ ಕೇಂದ್ರದ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದಲ್ಲಿ ಸಭೆ ನಡೆಯಿತು.