ಕಾಂಗ್ರೆಸ್ ಶಾಸಕರು ಓಡಿ ಹೋಗಲ್ವಂತೆ!

Webdunia
ಮಂಗಳವಾರ, 23 ಏಪ್ರಿಲ್ 2019 (16:43 IST)
ನಮ್ಮ ಪಕ್ಷದಿಂದ ಬಿಜೆಪಿಗೆ ಶಾಸಕರು ಓಡಿ ಹೋಗುತ್ತಾರೆ ಎಂಬುದು ಸುಳ್ಳು. ಯಾರೂ ಹೋಗಲ್ಲ. ಅಸಮಾಧಾನ ಇರುವ ಶಾಸಕರ ಮನವೊಲಿಕೆ ಮಾಡಲಿದ್ದೇವೆ. ಹೀಗಂತ ಡಿಸಿಎಂ ಹೇಳಿದ್ದಾರೆ.

ರಮೇಶ್ ಜಾರಕಿಹೋಳಿ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದಾರೋ ತಿಳಿದಿಲ್ಲ. ಅವರ ಮನವೊಲಿಕೆಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಕೂಡ ಪ್ರಯತ್ನ ಪಟ್ಟಿದ್ದಾರೆ. ನಾನೂ ಕೂಡ ಅವರೊಂದಿಗೆ ಮಾತನಾಡಲಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಹಾಕಿದ ಬಳಿಕ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅವರಿಗೆ ನಮ್ಮ ಪಕ್ಷ ಸಚಿವ ಸ್ಥಾನ ಹಾಗೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಮೊದಲೇ ನೀಡಿತ್ತು. ಆದಾಗ್ಯು ಅವರು ರಾಜೀನಾಮೆ ಕೊಡುವ ಕಾರಣ ಸ್ಪಷ್ಟವಾಗಿಲ್ಲ. 

ಕೆಲ ಕಾರಣದಿಂದ ಸಚಿವ ಸ್ಥಾನ ಹಿಂಪಡೆಯಲಾಗಿತ್ತು. ಆದರೆ, ಮತ್ತೆ ಅವರಿಗೆ ರಾಜಕೀಯವಾಗಿ ಜವಾಬ್ದಾರಿಗಳನ್ನು ಪಕ್ಷ ಕೊಡುತ್ತದೆ. ಮಂತ್ರಿ ಸ್ಥಾನ ತೆಗೆದಿದ್ದೇ ರಾಜೀನಾಮೆಗೆ ಕಾರಣವಾದರೆ ನಮ್ಮ ಮುಖಂಡರು ಅವರೊಂದಿಗೆ ಮಾತನಾಡಲಿದ್ದಾರೆ ಎಂದರು.

ಸರಕಾರ ಬಿದ್ದು ಹೋಗತ್ತೆ ಎಂದು ಬಹಳಷ್ಟು ಜನ ಆಸೆ ಇಟ್ಟುಕೊಂಡಿದ್ದಾರೆ. ಮಂತ್ರಿ, ಮುಖ್ಯಮಂತ್ರಿ ಆಗಬೇಕೆಂಬ ಕನಸು ಕಂಡಿದ್ದಾರೆ. ಆದರೆ, ನಮ್ಮ ಸರಕಾರ ಸುಭದ್ರವಾಗಿರುತ್ತದೆ. ಯಾವುದೇ ಕಾರಣಕ್ಕೂ ಸರಕಾರ ಪತನವಾಗುವುದಿಲ್ಲ ಎಂದು ಹೇಳಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಈ ಜಿಲ್ಲೆಗಳಲ್ಲಿ ಈ ವಾರವೂ ಭರ್ಜರಿ ಮಳೆ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್

ಭಾಷಣದ ವೇಳೆ ಕುಸಿದ ಪ್ರಶಿಕ್ಷಣಾರ್ಥಿ, ಮೊದಲು ನೀರು ಕುಡಿಸಿ, ಆರೈಕೆ ಮಾಡಿ ಎಂದ ಸಿದ್ದರಾಮಯ್ಯ, Video

ಸ್ನಾಗ ಗೃಹದಲ್ಲಿ ಬಿದ್ದು ಪೆಟ್ಟಾಗಿದ್ದ ಪಾಕ್ ಸೇನಾ ಮಾಜಿ ಮುಖ್ಯಸ್ಥ ಜಾವೇದ್ ಬಜ್ವಾ ಇನ್ನಿಲ್ಲ

ಕಿವಿಕೇಳಿಸಲ್ಲ, ಕಣ್ಣು ಮಂಜಾಗಿದ್ದರೂ ಅಭಿನಯದಲ್ಲೇ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನು ನೆನಪು ಮಾತ್ರ

ಮುಂದಿನ ಸುದ್ದಿ
Show comments