Publish Date: Mon, 08 Apr 2019 (16:53 IST)
Updated Date: Mon, 08 Apr 2019 (16:56 IST)
ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಅವರ ಗೈರಿನ ನಡುವೆಯೂ ಅಭ್ಯರ್ಥಿ ಬಹಿರಂಗ ಪ್ರಚಾರ ನಡೆಸಿದ್ದಾರೆ.
ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಬಹಿರಂಗ ಪ್ರಚಾರ ನಡೆಸಿದ್ದಾರೆ.
ಅಥಣಿ ಪಟ್ಟಣದ ಮಾಜಿ ಶಾಸಕ ಶಹಜಹಾನ್ ಡೋಂಗರ್ ಗಾಂವ ಮನೆಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಗೈರಾದ ರಮೇಶ್ ಜಾರಕಿಹೋಳಿ ನಡೆ ಕುತೂಹಲ ಹಾಗೂ ಚರ್ಚೆಗೆ ಕಾರಣವಾಯಿತು.
ಅಥಣಿ, ರಾಯಭಾಗ, ಚಿಕ್ಕೋಡಿ ಸೇರಿದಂತೆ ಹಲವೆಡೆ ನಡೆದ ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆ ಕಾರ್ಯಕ್ರಮಕ್ಕೆ ಗೈರಾಗಿರುವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ಲೋಕಸಭೆ ಚುನಾವಣೆಯಲ್ಲಿ ಯಾವ ಪರಿಣಾಮ ಬೀರಲಿದೆ ಎನ್ನೋ ಚರ್ಚೆ ನಡೆಯುತ್ತಿದೆ.