Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಬಗ್ಗೆ ಕುಮಾರ್ ಬಂಗಾರಪ್ಪ ನೀಡಿದ ಹೇಳಿಕೆಗೆ ಅಭಿಮಾನಿಗಳ ಆಕ್ಷೇಪ

Webdunia
ಶುಕ್ರವಾರ, 12 ಏಪ್ರಿಲ್ 2019 (09:43 IST)
ಬೆಂಗಳೂರು: ಪದೇ ಪದೇ ತಾನು ರಾಜಕೀಯಕ್ಕೆ ಬರುವುದಿಲ್ಲ ಎಂದರೂ ಶಿವರಾಜ್ ಕುಮಾರ್ ಹೆಸರು ಯಾವುದಾದರೂ ಒಂದು ಕಾರಣಕ್ಕೆ ರಾಜಕಾರಣದಲ್ಲಿ ಕೇಳಿಬರುತ್ತದೆ.


ಇದೀಗ ಶಿವರಾಜ್ ಕುಮಾರ್ ನೀಡಿದ ಹೇಳಿಕೆಯೊಂದಕ್ಕೆ ಪತ್ನಿ ಗೀತಾ ಸಹೋದರನೂ ಆಗಿರುವ ಕುಮಾರ್ ಬಂಗಾರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದು, ಶಿವರಾಜ್ ಕುಮಾರ್ ‘ಕವಚ’ ತೆಗೆದಿಟ್ಟು ರಾಜಕೀಯಕ್ಕೆ ಬರಲಿ ಎಂದು ವ್ಯಂಗ್ಯ ಮಾಡಿದ್ದಾರೆ.

ಜೆಡಿಎಸ್ ನಿಂದ ಗೀತಾ ಶಿವರಾಜ್ ಕುಮಾರ್ ಸಹೋದರ ಮಧು ಬಂಗಾರಪ್ಪ ಶಿವಮೊಗ್ಗ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಮಧು ಬಂಗಾರಪ್ಪ ಪರ ಗೀತಾ ಪ್ರಚಾರಕ್ಕೆ ಹೋಗಿದ್ದರು. ಆದರೆ ಶಿವರಾಜ್ ಕುಮಾರ್ ನಾನು ಯಾರ ಪರವಾಗಿಯೂ ಪ್ರಚಾರ ಮಾಡಲ್ಲ ಎಂದಿದ್ದರು.

ಹಾಗಿದ್ದರೂ ಕವಚ ಚಿತ್ರದ ಪ್ರಚಾರಕ್ಕೆ ಬಂದ ಶಿವರಾಜ್ ಕುಮಾರ್ ರನ್ನು ನೀವು ಮಧು ಪರ ಪ್ರಚಾರ ಮಾಡುತ್ತೀರಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಶಿವಣ್ಣ ‘ನಾನು ಯಾರ ಪರವಾಗಿಯೂ ಪ್ರಚಾರ ಮಾಡಲ್ಲ. ಮಧು ಒಳ್ಳೆಯ ಮನುಷ್ಯ. ಜನತೆಗೆ ಅವನು ಬೇಕಿಂದಿದ್ದರೆ ಅವರೇ ಓಟು ಹಾಕ್ತಾರೆ’ ಎಂದಿದ್ದರು. ಶಿವಣ್ಣ ಮಧು ಬಂಗಾರಪ್ಪ ಪರವಾಗಿ ಹೀಗೆ ಒಳ್ಳೆಯ ಮಾತನಾಡಿದ್ದು, ಬಿಜೆಪಿ ಶಾಸಕರಾಗಿರುವ ಸಹೋದರ ಕುಮಾರ್ ಬಂಗಾರಪ್ಪ ಪಿತ್ತ ನೆತ್ತಿಗೇರಿಸಿದೆ.

ಹೀಗಾಗಿಯೇ ಶಿವರಾಜ್ ಕುಮಾರ್ ಹರಿಹಾಯ್ದಿರುವ ಕುಮಾರ್ ಬಂಗಾರಪ್ಪ ಶಿವರಾಜ್ ಕುಮಾರ್ ಗೆ ರಾಜಕೀಯಕ್ಕೆ ಬರಬೇಕೆಂದಿದ್ದರೆ ಕವಚ ತೆಗೆದಿಟ್ಟು ನೇರವಾಗಿ ಬರಲಿ ಎಂದು ಕೆಂಡ ಕಾರಿದ್ದಾರೆ. ಕುಮಾರ್ ಹೇಳಿಕೆಗೆ ಶಿವರಾಜ್ ಕುಮಾರ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments