Webdunia - Bharat's app for daily news and videos

Install App

California Fire: ಕ್ಯಾಲಿಫೋರ್ನಿಯಾ ಕಾಡ್ಗಿಚ್ಚು: ಕೋಟಿ ಕೋಟಿ ಸಂಭಾವನೆ ಪಡೆಯುವ ಹಾಲಿವುಡ್ಡಿಗರು ಈಗ ಬೀದಿಯಲ್ಲಿ

Krishnaveni K
ಶುಕ್ರವಾರ, 10 ಜನವರಿ 2025 (10:29 IST)
Photo Credit: X
ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ ನಲ್ಲಿ ದಿಡೀರನೇ ಕಾಣಿಸಿಕೊಂಡ ಕಾಡ್ಗಿಚ್ಚಿನಿಂದ ಕೋಟಿ ಕೋಟಿ ಹಣ ಸಂಭಾವನೆ ಪಡೆಯುವ ಹಾಲಿವುಡ್ ಕಲಾವಿದರು ಈಗ ಬೀದಿಗೆ ಬಿದ್ದಂತಾಗಿದೆ.

ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಲ್ಲಿ ಸಾವಿನ ಸಂಖ್ಯೆ 5 ಕ್ಕೇರಿದೆ. ಇದುವರೆಗೆ ಸುಮಾರು 1.40 ಲಕ್ಷ ಮಂದಿಯನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ. ಹಲವರು ಮನೆ ಮಠ ಕಳೆದುಕೊಂಡಿದ್ದಾರೆ. ವಿಐಪಿಗಳು ತಮ್ಮ ಕಾರುಗಳಲ್ಲಿ ದಿನ ಕಳೆಯುವಂತಾಗಿದೆ.

ಕಾಡ್ಗಿಚ್ಚಿನ ಪರವಾಗಿ ಕ್ಯಾಲಿಫೋರ್ನಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಹಾಲಿವುಡ್ ಖ್ಯಾತ ನಾಮರು ವಾಸವಿರುವ ಹಾಲಿವುಡ್ ಹಿಲ್ ಗೂ ಕಾಡ್ಗಿಚ್ಚು ಹಬ್ಬಿದೆ. ಹಾಲಿವುಡ್ ಕಲಾವಿದರಾದ ಬಿಲ್ಲಿ ಕ್ರಿಸ್ಟಲ್, ಮ್ಯಾಂಡಿ ಮೋರ್, ಜೇಮೀ ಲೀ ಮುಂತಾದವರು ಮನೆ ಕಳೆದುಕೊಂಡಿದ್ದಾರೆ.

ವಿಶೇಷವೆಂದರೆ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಮಗನ ಮನೆಗೂ ಬೆಂಕಿ ಬಿದ್ದಿದೆ. ಬಾಲಿವುಡ್ ನಟಿ ನೋರಾ ಫತೇಹಿ ಮನೆ ಕೂಡಾ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಕಾಡ್ಗಿಚ್ಚಿನ ಸಂದರ್ಭದಲ್ಲಿ ನೋರಾ ಫತೇಹಿ ಮನೆ ಖಾಲಿ ಮಾಡಿದ್ದಾರೆ.  ಇನ್ನು ಕಾಡ್ಗಿಚ್ಚಿನ ಕಾರಣದಿಂದಾಗಿ ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ನಾಮಿನಿರ್ದೇಶನ ವಿಳಂಬವಾಗಿದೆ.

ಬೆಂಕಿ ನಂದಿಸಲು ನೀರಿಲ್ಲ
ವಿಶ್ವದ ದೊಡ್ಡಣ್ಣ ಎಂದೇ ಕರೆಯಿಸಿಕೊಳ್ಳುವ ಅಮೆರಿಕಾ ಈಗ ಕಾಡ್ಗಿಚ್ಚನ್ನು ನಂದಿಸಲು ನೀರಿಲ್ಲದೇ ಪರದಾಡುತ್ತಿದೆ. ಇದನ್ನು ಭಾವೀ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments