Webdunia - Bharat's app for daily news and videos

Install App

India Pakistan war: ಭಾರತದ ಬಗ್ಗೆ ಸುಳ್ಳಿನ ಕಂತೆ ಹರಡುತ್ತಿರುವ ಪಾಕಿಸ್ತಾನ

Krishnaveni K
ಶುಕ್ರವಾರ, 9 ಮೇ 2025 (09:43 IST)
Photo Credit: X
ನವದೆಹಲಿ: ನೇರವಾಗಿ ಹೋರಾಡಿ ಗೆಲ್ಲಲಾಗದ ರಣಹೇಡಿ ಪಾಕಿಸ್ತಾನ, ಭಾರತದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳಿನ ಕಂತೆಯನ್ನೇ ಹರಡುತ್ತಿದೆ.

ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ಉಗ್ರರ ಅಡುಗುದಾಣಗಳ ಮೇಲೆ ದಾಳಿ ಮಾಡಿದ ಬಳಿಕ ಪಾಕಿಸ್ತಾನ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡುತ್ತಿದೆ. ಮೊದಲು ಭಾರತೀಯ ಸೇನೆ ಬಿಳಿ ಬಾವುಟ ಹಾರಿಸಿ ನಮಗೆ ಶರಣಾಗಿದೆ ಎಂದಿತ್ತು.

ನಿನ್ನೆ ಭಾರತದ ಮೇಲೆ ಕ್ಷಿಪಣಿ ದಾಳಿ ಮಾಡಿ ವಿಫಲವಾದ ಬಳಿಕ ಪಾಕಿಸ್ತಾನ ಸುಳ್ಳಿನ ಕಂತೆಯನ್ನೇ ಹರಡುತ್ತಿದೆ. ರಜೌರಿಯಲ್ಲಿ ಉಗ್ರರು ಆತ್ಮಹತ್ಯಾ ಬಾಂಬರ್ ಗಳಾಗಿ ದಾಳಿ ಮಾಡಿದ್ದಾರೆ ಎಂದಿತ್ತು. ಬಳಿಕ ಪಾಕ್ ಸೆನೆ ಭಾರತದ ರಫೇಲ್ ಯುದ್ಧ ವಿಮಾನಗಳನ್ನು, ಡ್ರೋಣ್ ಗಳನ್ನು ಹೊಡೆದುರುಳಿಸಿದೆ ಎಂದು ಹಳೇ ಫೋಟೋ ತೋರಿಸಿ ಕೊಚ್ಚಿಕೊಂಡಿತ್ತು.

ಆದರೆ ಇದೆಲ್ಲವೂ ಸುಳ್ಳು ಎಂದು ಸಾಬೀತಾಗಿದೆ. ಸ್ವತಃ ಭಾರತದ ರಕ್ಷಣಾ ಇಲಾಖೆಯೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದೆ. ನೇರವಾಗಿ ಯುದ್ಧ ಮಾಡಿ ಗೆಲ್ಲಲಾಗದ ಪಾಕಿಸ್ತಾನ ಈಗ ಸುಳ್ಳು ಸುದ್ದಿ ಹಬ್ಬುತ್ತಿದೆ. ಇದೇ ಕಾರಣಕ್ಕೆ ನಿನ್ನೆ ಮತ್ತೆ ಭಾರತ ಹಲವು ಪಾಕ್ ಪ್ರೇರಿತ ಸೋಷಿಯಲ್ ಮೀಡಿಯಾಗಳನ್ನು ಬ್ಲಾಕ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments