Webdunia - Bharat's app for daily news and videos

Install App

ಭಾರತದ ಪ್ರಧಾನಿ ಮೋದಿ ನನ್ನ ಚಿಕ್ಕಮ್ಮನ ಮಗನೇ: ಪಾಕ್‌ ಸಂಸದ ವ್ಯಂಗ್ಯದ ಮಾತು ಹೇಳಿದ್ದೇಕೆ

Sampriya
ಭಾನುವಾರ, 4 ಮೇ 2025 (12:34 IST)
Photo Courtesy X
ಲಾಹೋರ್‌: ಪೆಹಲ್ಗಾಮ್‌ನಲ್ಲಿ ರಕ್ತಪಾತವಾದ ಬೆನ್ನಲ್ಲೇ ಭಾರತ- ಪಾಕಿಸ್ತಾನ ಯುದ್ಧದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಪಾಕಿಸ್ತಾನ ಸಂಸದರೊಬ್ಬರು ನಾಲಗೆ ಹರಿಬಿಟ್ಟಿದ್ದಾರೆ.

ಯುದ್ಧ ಕುರಿತಂತೆ ಸಂಸದ ಶೇರ್ ಅಫ್ಜಲ್ ಖಾನ್ ಮಾರ್ವತ್ ಅವರ ಬಳಿ ಮಾಧ್ಯಮದವರು ಎರಡು ದೇಶಗಳ ಮಧ್ಯೆ ಇರುವ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತದ ಪ್ರಧಾನಿ ನರೇಂದ್ರ ಮೋದಿ ಹಿಂದೆ ಸರಿಯಬೇಕು ಎಂದು ಭಾವಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.  ನಾನು ಹೇಳಿದ್ದಕ್ಕೆ ಅವರು ಹಿಂದೆ ಸರಿಯಲು ಮೋದಿ ನನ್ನ ಚಿಕ್ಕಮ್ಮನ ಮಗನೇ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.  

ಒಂದು ವೇಳೆ ಯುದ್ಧ ನಡೆದರೆ ಗನ್‌ ಹೊತ್ತುಕೊಂಡು ಗಡಿಗೆ ಹೋಗುತ್ತೀರಾ ಎಂದು ಸಂಸದ ಶೇರ್ ಅಫ್ಜಲ್ ಖಾನ್ ಮಾರ್ವತ್ ಅವರಿಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಅವರು ಒಂದು ವೇಳೆ ಭಾರತ- ಪಾಕಿಸ್ತಾನದ ಮಧ್ಯೆ ಯುದ್ಧ ಸಂಭವಿಸಿದರೆ ನಾನು ಇಂಗ್ಲೆಂಡಿಗೆ ಪಲಾಯನ ಮಾಡುತ್ತೇನೆ ಎಂದು ಹೇಳಿದ್ದಾರೆ.

ಅಫ್ಜಲ್ ಖಾನ್ ಮಾರ್ವತ್ ಉತ್ತರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಪಾಕಿಸ್ತಾನಿ ರಾಜಕಾರಣಿಗಳು ಸಹ ತಮ್ಮ ಸೈನ್ಯವನ್ನು ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ಟ್ರೋಲಿಗರು ಕಾಲೆಳೆದಿದ್ದಾರೆ.

ಮಾರ್ವತ್ ಈ ಹಿಂದೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸದಸ್ಯರಾಗಿದ್ದರು. ಪಕ್ಷ ಮತ್ತು ನಾಯಕತ್ವದ ಬಗ್ಗೆ ಪದೇ ಪದೇ ಟೀಕೆ ಮಾಡುತ್ತಿದ್ದ ಕಾರಣ ಇಮ್ರಾನ್ ಖಾನ್ ಮಾರ್ವತ್ ಅವರನ್ನು ಪ್ರಮುಖ ಹುದ್ದೆಗಳಿಂದ ತೆಗೆದು ಹಾಕಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments