Webdunia - Bharat's app for daily news and videos

Install App

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

Krishnaveni K
ಭಾನುವಾರ, 27 ಏಪ್ರಿಲ್ 2025 (13:37 IST)
Photo Credit: X
ನವದೆಹಲಿ: ನಾವು ಪರಮಾಣು ಬಾಂಬ್, ಕ್ಷಿಪಣಿಗಳನ್ನು ಸುಮ್ನೇ ಇಟ್ಕೊಂಡಿಲ್ಲ. ಸಿಂಧೂ ನದಿ ನೀರು ಬಂದ್ ಮಾಡಿದ್ರೆ ಯುದ್ಧಕ್ಕೆ ಸಿದ್ಧ ಎಂದು ಭಾರತಕ್ಕೆ ಪಾಕಿಸ್ತಾನದ ಸಚಿವ ಹನೀಫ್ ಅಬ್ಬಾಸ್ ಎಚ್ಚರಿಕೆ ನೀಡಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಾದ ಬಳಿಕ ಪಾಕಿಸ್ತಾನದ ವಿರುದ್ಧ ಭಾರತ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಸಿಂಧೂ ನದಿ ನೀರು ಒಪ್ಪಂದ ರದ್ದುಗೊಳಿಸಿರುವುದು ಪ್ರಮುಖವಾಗಿದೆ. ಇದರಿಂದಾಗಿ ಈಗ ಪಾಕಿಸ್ತಾನಕ್ಕೆ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ.

ಇದು ಪಾಕಿಸ್ತಾನವನ್ನು ರೊಚ್ಚಿಗೇಳಿಸಿದ್ದು, ದಿನಕ್ಕೊಬ್ಬರಂತೆ ನದಿ ನೀರು ಬಿಡುವಂತೆ ಭಾರತಕ್ಕೆ ಬೆದರಿಕೆ ಹಾಕುತ್ತಲೇ ಇದ್ದಾರೆ. ನಿನ್ನೆಯಷ್ಟೇ ಬಿಲಾವಲ್ ಭುಟ್ಟೋ ನದಿ ನೀರು ಹರಿಸದಿದ್ದರೆ ರಕ್ತಪಾತ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಇಂದು ಸಚಿವ ಹನೀಫ್ ಅಬ್ಬಾಸ್ ಸರದಿ. ‘ನಮ್ಮ ಬಳಿಯೂ ಪರಮಾಣು ಬಾಂಬ್ ಇದೆ. ಕ್ಷಿಪಣಿಗಳು, ಬಾಂಬ್ ಗಳನ್ನು ಸುಮ್ಮನೇ ಇಟ್ಟುಕೊಂಡಿಲ್ಲ. ನಮ್ಮ ನೀರು ಬಿಡದೇ ಇದ್ದರೆ ಅದನ್ನು ಬಳಸಲೂ ಸಿದ್ಧ’ ಎಂದು ಯುದ್ಧ ಮಾಡುವ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments