Webdunia - Bharat's app for daily news and videos

Install App

IPL 2025: ಚೆನ್ನೈ ತಂಡದ ಮಹಾ ಎಡವಟ್ಟು: ನಿಯಮ ಮರೆತು ಪಂದ್ಯ ಸೋತ ಧೋನಿ ಪಡೆ

Sampriya
ಭಾನುವಾರ, 4 ಮೇ 2025 (12:16 IST)
Photo Courtesy X
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಐಪಿಎಲ್‌ ನಿಯಮವನ್ನು ಮರೆತು ಮಹಾ ಎಡವಟ್ಟು ಮಾಡಿಕೊಂಡಿದೆ. ಇದಕ್ಕಾಗಿ ಪಂದ್ಯವನ್ನೇ ಸೋಲಬೇಕಾಯಿತು. ಇದು ಅಚ್ಚರಿಯಾದೂ ಸತ್ಯ.

ಚೆನ್ನೈ ತಂಡದ ಗೆಲುವಿಗೆ ಕೊನೆಯ 22 ಎಸೆತಗಳಲ್ಲಿ 42 ರನ್‌ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ ಲುಂಗಿ ಎನ್​ಗಿಡಿ ಎಸೆತದಲ್ಲಿ ಎಲ್​ಬಿ ಆಗಿದ್ದರು. ಆರ್​ಸಿಬಿ ಆಟಗಾರರ ಮನವಿಗೆ ಅಂಪೈರ್ ಎಲ್​ಬಿಡಬ್ಲ್ಯೂ ಔಟ್ ನೀಡಿದರು. ಆದರೆ ನಿಯಮ ಗೊತ್ತಿಲ್ಲದೆ ಬ್ಯಾಟರ್​ಗಳು ರನ್ ಕದಿಯಲು ಓಡಿದ್ದು ಸಿಎಸ್​ಕೆ ಪಾಲಿಗೆ ದುಬಾರಿಯಾಯಿತು.

ನಿಯಮದ ಪ್ರಕಾರ, ಎಲ್​ಬಿಡಬ್ಲ್ಯೂ ಆದರೆ 15 ಸೆಕೆಂಡ್​ಗಳ ಒಳಗೆ ಡಿಆರ್​ಎಸ್​ಗೆ ಮನವಿ ಸಲ್ಲಿಸಬೇಕು. ಅದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ, ಮನವಿಯನ್ನು ತಿರಸ್ಕರಿಸಲಾಗುತ್ತದೆ. ಆದರೆ ಈ ನಿಯಮದ ಬಗ್ಗೆ ಅರಿವಿಲ್ಲದೆ, ಡೆವಾಲ್ಡ್ ಬ್ರೆವಿಸ್ ಹಾಗೂ ರವೀಂದ್ರ ಜಡೇಜಾ 2 ರನ್ ಓಡಿದ್ದಾರೆ.

ಅದರಲ್ಲೂ ಒಂದು ರನ್ ಕಲೆಹಾಕಿದ ಬಳಿಕ ಡಿಆರ್​ಎಸ್​ಗೆ ಮನವಿ ಸಲ್ಲಿಸಿದ್ದರೂ ಬ್ರೆವಿಸ್​ ಅವರಿಗೆ ರಿವ್ಯೂ ಲಭಿಸುತ್ತಿತ್ತು. ಇದರ ಪರಿಕಲ್ಪನೆಯೇ ಇಲ್ಲದೆ, ರವೀಂದ್ರ ಜಡೇಜ ಡೆವಾಲ್ಡ್ ಬ್ರೆವಿಸ್ ಅವರನ್ನು 2ನೇ ರನ್​ಗಾಗಿ ಕರೆದಿದ್ದಾರೆ. ಇತ್ತ ಕಡೆಯಿಂದ ಸ್ಟ್ರೈಕ್​ನತ್ತ ಓಡಿದ ಬ್ರೆವಿಸ್ ಆ ಬಳಿಕ ಜಡೇಜಾ ಜೊತೆ ಚರ್ಚಿಸಿ ಡಿಆರ್​ಎಸ್​ಗೆ ಮನವಿ ಸಲ್ಲಿಸಿದ್ದಾರೆ.

ಅಷ್ಟರಲ್ಲಾಗಲೇ ಟೈಮರ್ 25 ಸೆಕೆಂಡ್​ಗಳನ್ನು ದಾಟಿತ್ತು. ಅಂದರೆ 15 ಸೆಕೆಂಡ್​ಗಳಲ್ಲಿ ತೆಗೆದುಕೊಳ್ಳಬೇಕಾದ ರಿವ್ಯೂ ಅನ್ನು ಬ್ರೆವಿಸ್ 25 ಸೆಕೆಂಡ್​ಗಳ ಬಳಿಕ ತೆಗೆದುಕೊಂಡಿದ್ದಾರೆ. ಹೀಗಾಗಿ ಅಂಪೈರ್ ಮನವಿಯನ್ನು ತಿರಸ್ಕರಿಸಿದರು. ಇದರಿಂದಾಗಿ ಡೆವಾಲ್ಡ್ ಬ್ರೆವಿಸ್ ಮೇಲ್ಮನವಿ ಇಲ್ಲದೆ ಪೆವಿಲಿಯನ್​ಗೆ ಹಿಂತಿರುಗಬೇಕಾಯಿತು. ಕುತೂಹಲಕಾರಿ ವಿಷಯ ಎಂದರೆ ಅದು ನಾಟೌಟ್ ಆಗಿತ್ತು. ಅಂದರೆ ರಿಪ್ಲೇ ವಿಡಿಯೋದಲ್ಲಿ ಡೆವಾಲ್ಡ್ ಬ್ರೆವಿಸ್ ಕಾಲಿಗೆ ತಾಗಿದ ಚೆಂಡು ವಿಕೆಟ್​ನಿಂದ ದೂರ ಸಾಗುತ್ತಿರುವುದು ಕಂಡು ಬಂದಿದೆ.

ಆರ್‌ಸಿಬಿ ತಂಡವು 5 ವಿಕೆಟ್ ನಷ್ಟಕ್ಕೆ 213 ರನ್ ಗಳ ದೊಡ್ಡ ಗುರಿ ಮುಂದಿಟ್ಟಿತು. ಚೆನ್ನೈ ತಂಡ ಐದು ವಿಕೆಟ್‌ಗೆ 211 ರನ್‌ ಗಳಿಸಿ 2 ರನ್‌ನಿಂದ ಸೋಲು ಕಂಡಿತ್ತು.
 <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments