Webdunia - Bharat's app for daily news and videos

Install App

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

Sampriya
ಗುರುವಾರ, 17 ಏಪ್ರಿಲ್ 2025 (19:32 IST)
Photo Courtesy X
ಮುಂಬೈ: ಐಪಿಎಲ್‌ನ ಇಂದಿನ ಹೈವೋಲ್ಟೇಜ್‌ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡವು ಕಳೆದ ಬಾರಿಯ ರನ್ನರ್ಸ್‌ ಅಪ್‌ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಎದುರಿಸಲಿದೆ.

ಟಾಸ್‌ ಗೆದ್ದ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದೆ. ಸ್ಪೋಟಕ ಬ್ಯಾಟರ್‌ಗಳನ್ನು ಒಳಗೊಂಡ ಹೈದರಾಬಾದ್‌ ಮೊದಲು ಬ್ಯಾಟಿಂಗ್‌ ಮಾಡಲಿದ್ದು, ರನ್‌ ಹೊಳೆ ಹರಿಯುವ ನಿರೀಕ್ಷೆಯಿದೆ.

ಉಭಯ ತಂಡಗಳು ತಲಾ ಆರು ಪಂದ್ಯಗಳಲ್ಲಿ ಆಡಿದ್ದು, ನಾಲ್ಕರಲ್ಲಿ ಮುಗ್ಗರಿಸಿವೆ. ಪಾಯಿಂಟ್‌ ಪಟ್ಟಿಯಲ್ಲಿ ಮುಂಬೈ 7ನೇ ಸ್ಥಾನದಲ್ಲಿದ್ದರೆ, ಹೈದರಾಬಾದ್‌ 9ನೇ ಸ್ಥಾನದಲ್ಲಿದೆ.

ಬಿರುಸಿನ ಹೊಡೆತಗಳಿಗೆ ಹೆಸರಾಗಿರುವ ಸನ್‌ರೈಸರ್ಸ್‌ ಬ್ಯಾಟರ್‌ಗಳು ಹಾಗೂ ಮುಂಬೈನ ಶ್ರೇಷ್ಠ ಬೌಲಿಂಗ್‌ ವಿಭಾಗದ ನಡುವಣ ಹೋರಾಟಕ್ಕೆ ಈ ಪಂದ್ಯವು ಸಾಕ್ಷಿಯಾಗಲಿದೆ. ಗಾಯದಿಂದ ಸುಮಾರು ಮೂರು ತಿಂಗಳು ವಿಶ್ರಾಂತಿಯಲ್ಲಿದ್ದ ಮುಂಬೈ ವೇಗಿ ಜಸ್‌ಪ್ರೀತ್‌ ಬೂಮ್ರಾ ಐಪಿಎಲ್‌ಗೆ ಮರಳಿದ್ದಾರೆ. ಆದರೆ, ಆಡಿದ ಎರಡು ಪಂದ್ಯಗಳಲ್ಲಿಯೂ ಅವರು ಅಷ್ಟೇನೂ ಪರಿಣಾಮಕಾರಿ ಬೌಲಿಂಗ್ ಮಾಡಿಲ್ಲ. ಹಾಗಾಗಿ, ಅವರಿಗೆ ಈ ಪಂದ್ಯದಲ್ಲಿ ಕಠಿಣ ಪರೀಕ್ಷೆ ಎದುರಾಗಿದೆ.

ಬೂಮ್ರಾ ಮಾತ್ರವಲ್ಲದೆ, ಟ್ರೆಂಟ್‌ ಬೌಲ್ಟ್‌, ದೀಪಕ್‌ ಚಹಾರ್‌ ಕೂಡ ಉತ್ತಮ ಬೌಲಿಂಗ್‌ ಮಾಡಬೇಕಿದೆ. ಸ್ಫೋಟಕ ಬ್ಯಾಟಿಂಗ್‌ ನಡೆಸುವ ಅಭಿಷೇಕ್ ಶರ್ಮಾ, ಬೀಸು ಹೊಡೆತಗಳ ಪರಿಣತರಾದ ಇಶಾನ್ ಕಿಶನ್, ಟ್ರಾವಿಸ್ ಹೆಡ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರನ್ನು ಕಟ್ಟಿಹಾಕುವುದು ಕಠಿಣ ಅವರ ಮುಂದೆ ಇದೆ.

ಸ್ಟಾರ್‌ ಬ್ಯಾಟರ್‌ ರೋಹಿತ್ ಶರ್ಮಾ ಕೂಡ ಲಯ ಕಂಡುಕೊಳ್ಳಲು ಪರದಾಡುತ್ತಿರುವುದು ನಾಯಕ ಹಾರ್ದಿಕ್‌ ಪಾಂಡ್ಯಗೆ ತಲೆನೋವಾಗಿದೆ. ಮುಂಬೈನ ಬ್ಯಾಟಿಂಗ್ ವಿಭಾಗವು ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಅವರ ಮೇಲೆ ಅವಲಂಬಿತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಮುಂದಿನ ಸುದ್ದಿ
Show comments