Webdunia - Bharat's app for daily news and videos

Install App

IPL 2025: ಚೆನ್ನೈ ವಿರುದ್ಧದ ರೋಚಕ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ: ಮತ್ತೆ ಅಗ್ರಸ್ಥಾನದೊಂದಿಗೆ ಪ್ಲೇಆಫ್‌ಗೆ ಸನಿಹ

Sampriya
ಭಾನುವಾರ, 4 ಮೇ 2025 (00:02 IST)
Photo Courtesy X
ಬೆಂಗಳೂರು: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಸಾಂಘಿಕ ಪ್ರದರ್ಶನ ನೀಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 2 ರನ್‌ಗಳ ಜಯ ಸಾಧಿಸಿತು.

ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ರನ್ ಹೊಳೆ ಹರಿಸಿತು., ಎದುರಾಳಿ ತಂಡಕ್ಕೆ 214 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು.

ವಿರಾಟ್‌ ಕೊಹ್ಲಿ(62 ರನ್‌, 33 ಎಸೆತ) ಮತ್ತು ಜಾಕೊಬ್‌ ಬೆಥೆಲ್‌(55 ರನ್‌, 33 ಎಸೆತ) ಕೇವಲ 9.5 ಓವರ್‌ಗಳಲ್ಲೇ 97 ರನ್‌ ಕೂಡಿಸಿ ಮಿಂಚಿನ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಮಧ್ಯಮ ಕ್ರಮಾಂಕದ ಆಟಗಾರರು ಎಡವಿದರೂ ಕೊನೆಯಲ್ಲಿ ಬಂದ ರೊಯಾರಿಯೊ ಶೆಫರ್ಡ್‌ ಕೇವಲ 14 ಎಸೆತಗಳಲ್ಲಿ 53 ರನ್‌ ಗಳಿಸಿ ಎರಡನೇ ಅತಿವೇಗದ ಅರ್ಧಶತಕ ಸಿಡಿಸಿದರು.

ಆರ್‌ಸಿಬಿ ನೀಡಿದ ಗುರಿ ಬೆನ್ನತ್ತಿದ್ದ ಸಿಎಸ್‌ಕೆ ತಂಡ, ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಪ್ರಬಲ ಪೈಪೋಟಿ ನೀಡಿತು. ಆರಂಭಿಕ ಆಟಗಾರ 17ರ ಹರೆಯದ ಆಯುಷ್ ಮಾತ್ರೆ 48 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 9 ಫೋರ್ ಒಳಗೊಂಡು 94 ರನ್ ಸಿಡಿಸಿ ಲುಂಗಿ ಎನ್ ಗಿಡಿಗೆ ವಿಕೆಟ್ ಒಪ್ಪಿಸುವ ಮೂಲಕ ಕೇವಲ ಆರು ರನ್‌ಗಳಿಂದ ಶತಕ ವಂಚಿತರಾದರು. ಅವರ ವಿಕೆಟ್‌ ಉರಳುತ್ತಿದ್ದಂತೆ ಪಂದ್ಯ ತಿರುವು ಪಡೆಯಿತು.

ಆಲ್ ರೌಂಡರ್ ರವೀಂದ್ರ ಜಡೇಜಾ, ಆಯುಷ್ ಜೊತೆಗೂಡಿ ತಂಡಕ್ಕೆ ಬಲ‌‌ ತುಂಬಿದರು. ಆಯುಷ್ ಹಾಗೂ ಡೆವಾಲ್ಡ್ ಬ್ರೆವಿಸ್ ವಿಕೆಟ್‌ಗಳನ್ನು ಒಂದರ ಮೇಲೊಂದರಂತೆ ಕಬಳಿಸಿದ ಎನ್ ಗಿಡಿ, ಸಿಎಸ್‌ಕೆ ಆಟಗಾರರನ್ನು ಕಾಡಿದರು.

ಚೆನ್ನೈ ತಂಡಕ್ಕೆ 11 ಪಂದ್ಯಗಳಲ್ಲಿ ಇದು ಒಂಬತ್ತನೇ ಸೋಲಾಗಿದೆ. ಧೋನಿ ಪಡೆ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಈ ಗೆಲುವಿನೊಡನೇ ಆರ್‌ಸಿಬಿ ತಂಡ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದು, ಪ್ಲೇ ಆಫ್‌ಗೆ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments