Webdunia - Bharat's app for daily news and videos

Install App

ಟೂರ್ನಿಯಿಂದ ಚೆನ್ನೈ ತಂಡ ಹೊರಬೀಳುತ್ತಿದ್ದಂತೆ ಮುಂದಿನ ಐಪಿಎಲ್‌ ಆಡುವ ಬಗ್ಗೆ ಧೋನಿ ಹೇಳಿದ್ದೇನು

Sampriya
ಗುರುವಾರ, 1 ಮೇ 2025 (14:08 IST)
ಚೆನ್ನೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಪ್ರಸಕ್ತ ಆವೃತ್ತಿ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಮೇಲಿರುವ ತಂಡಗಳು ಪ್ಲೇ ಆಫ್‌ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿವೆ. ಈ ಮಧ್ಯೆ ಕೊನೆಯ ಸ್ಥಾನದಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಟೂರ್ನಿಯಿಂದಲೇ ಹೊರಬಿದ್ದಿದೆ.

ಈ ಬಾರಿ ಕಳಪೆ ಪ್ರದರ್ಶನ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ-ಆಫ್‌ಗೆ ಪ್ರವೇಶಿಸುವಲ್ಲಿ ವಿಫಲವಾಗಿದೆ. ಇದರೊಂದಿಗೆ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಿನ ವರ್ಷವೂ ಆಡುತ್ತಾರೆಯೋ ಅಥವಾ ಈ ಸಾಲಿನ ಬಳಿಕ ನಿವೃತ್ತಿ ಘೋಷಿಸಲಿದ್ದಾರೆಯೇ ಎಂಬುದರ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಪ್ರಸಕ್ತ ಸಾಲಿನಲ್ಲಿ ಋತುರಾಜ್ ಗಾಯಕವಾಡ್ ಗಾಯಗೊಂಡಿದ್ದರಿಂದ ಧೋನಿ ಮತ್ತೆ ನಾಯಕತ್ವ ವಹಿಸಿದ್ದರು. ಆದರೂ ಚೆನ್ನೈ ತಂಡದ ಅದೃಷ್ಟ ಬದಲಾಗಲಿಲ್ಲ. ಚೆಪಾಕ್‌ನಲ್ಲಿ ಸತತ ಐದನೇ ಸೋಲಿನ ಮುಖಭಂಗಕ್ಕೊಳಗಾಗಿದೆ.

ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾಗಿರುವ ಸಿಎಸ್‌ಕೆ, ಧೋನಿ ನಾಯಕತ್ವದಲ್ಲಿ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಆದರೆ ಕಳೆದೆರಡು ಆವೃತ್ತಿಗಳಲ್ಲಿ ಪ್ಲೇ-ಆಫ್ ಪ್ರವೇಶಿಸುವಲ್ಲಿ ವಿಫಲವಾಗಿದೆ.

ಈ ಮಧ್ಯೆ ಮುಂದಿನ ಐಪಿಎಲ್‌ ಆವೃತ್ತಿಯನ್ನು ಆಡುವ ಬಗ್ಗೆ 43 ವರ್ಷದ ಧೋನಿ ಪ್ರತಿಕ್ರಿಯಿಸಿದ್ದಾರೆ. ಚೆಪಾಕ್‌ನಲ್ಲಿ ಟಾಸ್ ವೇಳೆ ಅಭಿಮಾನಿಗಳಿಂದ ಭಾರಿ ಬೆಂಬಲ ವ್ಯಕ್ತವಾಯಿತು. ಈ ವೇಳೆ ಡ್ಯಾನಿ ಮೊರಿಸನ್, ಇದರ ಅರ್ಥ ಮುಂದಿನ ವರ್ಷವೂ ನೀವು ಬರುತ್ತಿದ್ದೀರಾ ಎಂದು ಧೋನಿ ಅವರಿಗೆ ಪ್ರಶ್ನಿಸಿದರು.

ಇದಕ್ಕೆ ಬಹಳ ಬುದ್ಧಿವಂತಿಕೆಯಿಂದ ಧೋನಿ ಉತ್ತರಿಸಿದ್ದಾರೆ. ನಾನು ಮುಂದಿನ ಪಂದ್ಯ ಆಡುತ್ತೇನೆಯೋ ಎಂಬುದು ಗೊತ್ತಿಲ್ಲ ಎನ್ನುವ ಮೂಲಕ 19ನೇ ಆವೃತ್ತಿಯಲ್ಲಿ ಮತ್ತೆ ಕಣಕ್ಕೆ ಇಳಿದರೂ ಅಚ್ಚರಿಯಿಲ್ಲ ಎಂಬಂತೆ ಉತ್ತರಿಸಿದ್ದಾರೆ. ಇದರಿಂದ ಅಭಿಮಾನಿಗಳು ಮಾತ್ರ ಫುಲ್‌ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ದೋಹಾ ಡೈಮಂಡ್‌ ಲೀಗ್‌ನಲ್ಲಿ ನೀರಜ್ ಚೋಪ್ರಾ ವಿರುದ್ಧ ಸ್ಪರ್ಧಿಸದ ಪಾಕ್‌ನ ಅರ್ಷದ್‌ ನದೀಮ್, ಕಾರಣ ಹೀಗಿದೆ

ಪಂದ್ಯ ನಿಂತ್ರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಿರಾಕಲ್‌ಗೆ ಕೊಹ್ಲಿ ಅಭಿಮಾನಿಗಳು ಫುಲ್ ಖುಷ್‌, Video Viral

ಮುಂದಿನ ಸುದ್ದಿ
Show comments