ಪ್ರತಿಭಟನಾಕಾರರಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಮೇಲೆ ಚಪ್ಪಲಿ ಎಸೆತ

Webdunia
ಗುರುವಾರ, 12 ಏಪ್ರಿಲ್ 2018 (09:37 IST)
ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮೊನ್ನೆ ನಡೆದ ಐಪಿಎಲ್ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ರವೀಂದ್ರ ಜಡೇಜಾ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಕೆಕೆಆರ್ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ 8 ನೇ ಓವರ್ ನಲ್ಲಿ ಬೌಂಡರಿ ಗೆರೆ ಬಳಿ ನಿಂತು ಫೀಲ್ಡಿಂಗ್ ಮಾಡುತ್ತಿದ್ದ ಜಡೇಜಾ ಮೇಲೆ ಕಾವೇರಿ ಪ್ರತಿಭಟನಾಕಾರರು ಚಪ್ಪಲಿ ಎಸೆದಿದ್ದಾರೆ. ಬಳಿಕ ದ.ಆಫ್ರಿಕಾ ಮೂಲದ ಆಟಗಾರರಾದ ಫಾ ಡು ಪ್ಲೆಸಿಸ್ ಮತ್ತು ಲುಂಗಿ ನಿಗಿಡಿ ಮೇಲೂ ಚಪ್ಪಲಿ ಎಸೆಯಲಾಗಿದೆ. ಅದೃಷ್ಟವಶಾತ್ ಇದು ಆಟಗಾರರ ಬಳಿ ಬಿದ್ದಿತ್ತಷ್ಟೆ.

ಇದೀಗ ಚೆನ್ನೈ ಅಭಿಮಾನಿಗಳು ಕ್ರಿಕೆಟಿಗರ ಮೇಲೆ ಈ ರೀತಿ ವರ್ತನೆ ತೋರಿದ ಪ್ರತಿಭಟನಾಕಾರರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, ಆಟಗಾರರ ಬಳಿ ಕ್ಷಮೆ ಯಾಚಿಸಿದ್ದಾರೆ. ಮೊನ್ನೆಯ ಪಂದ್ಯ ಪ್ರತಿಭಟನೆಯಿಂದಾಗಿಯೇ ಸುದ್ದಿಯಾಗಿತ್ತು. ಈ ಘಟನೆಯಿಂದಾಗಿ ಇದೀಗ ಚೆನ್ನೈ ಮೈದಾನದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳೇ ಸ್ಥಳಾಂತರವಾಗುವ ಸಂಭವವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಸ್ಟ್ರೇಲಿಯಾ ಇಲ್ಲದ ಟಿ20 ವಿಶ್ವಕಪ್ ಸೂಪರ್ 8: ಅದೊಂದು ಅಹಂಕಾರವೇ ಅವನತಿಗೆ ಕಾರಣವಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಗೌತಮ್ ಗಂಭೀರ್ ಗುಡ್ ಬೈ: ಏನಿದು ಹೊಸ ಸುದ್ದಿ

T20 WC: ಸೋಲೇ ಕಾಣದ ಟೀಂ ಇಂಡಿಯಾಗೆ ಇಂದು ಗೆಲುವೇ ಕಾಣದ ನೆದರ್ಲ್ಯಾಂಡ್ಸ್ ಎದುರಾಳಿ

ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ 8 ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಬೆಂಕಿ ಬೌಲಿಂಗ್ ವಿಡಿಯೋ ನೋಡಿ

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

ಮುಂದಿನ ಸುದ್ದಿ
Show comments