Webdunia - Bharat's app for daily news and videos

Install App

ಫೆಬ್ರವರಿ 1 ರಿಂದ ಹೊಸ ಕೇಬಲ್ ನೀತಿ ಜಾರಿ; ಕೂಡಲೇ ಆಯ್ಕೆ ಮಾಡಿ ನಿಮ್ಮ ಇಷ್ಟದ ಚಾನೆಲ್

Webdunia
ಮಂಗಳವಾರ, 29 ಜನವರಿ 2019 (08:35 IST)
ಬೆಂಗಳೂರು : ಕೇಬಲ್ ಟಿವಿ ಮತ್ತು ಡಿಟಿಹೆಚ್ ನ ಅಸ್ತಿತ್ವದಲ್ಲಿರುವ ನಿಯಮಗಳು ಜನವರಿ 31, 2019 ರಿಂದ ರದ್ದಾಗಲಿದ್ದು, ಫೆಬ್ರವರಿ 1 ರಿಂದ ಹೊಸ ಕೇಬಲ್ ನೀತಿ ಜಾರಿಗೆ ಬರಲಿದೆ.


ಕೇಬಲ್ ಟಿವಿ ಮತ್ತು ಡಿಟಿಹೆಚ್ ದರದ ಮಾಹಿತಿಗಳನ್ನು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ಟ್ರಾಯ್ ನಿಯಮದ ಪ್ರಕಾರ ಜನವರಿ 31 ರೊಳಗೆ ಗ್ರಾಹಕರು ತಮಗೆ ಇಷ್ಟವಾದ ಪೇ ಚಾನೆಲ್ ಗಳನ್ನು ಆಯ್ಕೆ ಮಾಡಿಕೊಳ್ಳಬೇಕು.


ಕನ್ನಡದ ಪೇಯ್ಡ್ ಚಾನೆಲ್ ಗಳ ದರ ಇಂತಿದೆ: ನ್ಯೂಸ್ 18 ಕನ್ನಡ 25 ಪೈಸೆ, ಸ್ಟಾರ್ ಸ್ಪೋರ್ಟ್ಸ್ ಕನ್ನಡ 19 ರೂ., ಚಿಂಟು ಟಿವಿ ಕನ್ನಡ 6 ರೂ., ಉದಯ ಕಾಮಿಡಿ 6 ರೂ., ಉದಯ ಮೂವೀಸ್ 16 ರೂ., ಉದಯ ಮ್ಯೂಸಿಕ್ 6 ರೂ., ಉದಯ ಟಿವಿ 17 ರೂ., ಕಲರ್ಸ್ ಕನ್ನಡ 19 ರೂ., ಸ್ಟಾರ್ ಸುವರ್ಣ 19 ರೂ., ಜೀ ಕನ್ನಡ 19 ರೂ., ಸುವರ್ಣ ಪ್ಲಸ್ ಚಾನಲ್ ಗೆ 5 ರೂ. ದರ ಇದೆ.
ಡಿಸ್ಕವರಿ ಚಾನೆಲ್ ಗೆ 4 ರೂ., ಡಿಸ್ಕವರಿ ಕಿಡ್ಸ್ ಚಾನೆಲ್ ಗೆ 3 ರೂ., ಅನಿಮಲ್ ಪ್ಲಾನೆಟ್ ಗೆ 24 ರೂ. ದರ ನಿಗದಿ ಮಾಡಲಾಗಿದೆ. ಸ್ಪೋರ್ಟ್ಸ್  ಚಾನೆಲ್ ಗಳಾದ ಸೋನಿ ಇ.ಎಸ್.ಪಿ.ಎನ್. ಹೆಚ್ ಡಿಗೆ 7 ರೂ., ಸೋನಿ ಇ.ಎಸ್.ಪಿ.ಎನ್. ಗೆ 5 ರೂ., ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಗೆ 4 ರೂ. ದರ ನಿಗದಿ ಮಾಡಲಾಗಿದೆ.


ಬೇಸಿಕ್ ಪ್ಯಾಕೇಜ್ ನಲ್ಲಿ 130 ರೂ.ಗೆ 100 ಟಿವಿ ಚಾನೆಲ್ ಸಿಗುತ್ತದೆ. ಆದರೆ ಇದಕ್ಕೆ ಜಿ.ಎಸ್.ಟಿ. ಸೇರಿ 153 ರೂ. ಪಾವತಿಸಬೇಕಿದೆ. ಹಾಗೇ 100 ಕ್ಕಿಂತ ಹೆಚ್ಚು ಚಾನೆಲ್ ವೀಕ್ಷಿಸಲು ರೂ. 20ಕ್ಕೆ 25 ಚಾನೆಲ್ ಗಳ ಸ್ಲ್ಯಾಬ್ ಪಡೆಯಬಹುದು. ಪೇಡ್ ಚಾನೆಲ್ ಗಳ ಆಯ್ಕೆಯೊಂದಿಗೆ ಪಾವತಿಸಬೆಕಾಗುವ ಬಿಲ್ ಕೂಡ ಏರಿಕೆಯಾಗುತ್ತದೆ. ಉಚಿತ ಚಾನೆಲ್ ಗಳ ಸೇವೆ ಹಿಂದಿನಂತೆಯೇ ಮುಂದುವರೆಯಲಿದ್ದು, ಪೇಯ್ಡ್ ಚಾನೆಲ್ ಗಳ ಸೇವೆಯಲ್ಲಿ ಬದಲಾವಣೆಯಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments