Webdunia - Bharat's app for daily news and videos

Install App

ಕರ್ಫ್ಯೂ ಬೆನ್ನೆಲೆ ಪೊಲೀಸರ ದಂಡ ವಸೂಲಿ

Webdunia
ಸೋಮವಾರ, 10 ಜನವರಿ 2022 (17:59 IST)
ವಾರಾಂತ್ಯದ ಕರ್ಫ್ಯೂ ಜಾರಿ ಇರುವ ನಡುವೆಯೂ ಭಾನುವಾರ ನಗರದಲ್ಲಿ ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ಓಡಾಡುತ್ತಿದ್ದವರಿಗೆ ಸಂಚಾರಕ್ಕೆ ಕಾರಣಗಳನ್ನು ಕೇಳುವ
ನೆಪದಲ್ಲಿ ಪೊಲೀಸರು, ಈ ಹಿಂದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವ ಪ್ರಕರಣಗಳ ದಂಡ ವಸೂಲಿಗೆ ಇಳಿದಿದ್ದು ಕಂಡು ಬಂದಿತು.
ವಾರಾಂತ್ಯದ ಕರ್ಫ್ಯೂ ಜಾರಿ ಇರುವುದರಿಂದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ಕಾರಣಕ್ಕೂ ಜನರು ಸಂಚರಿಸಲು ಅವಕಾಶವಿಲ್ಲ. ಆದರೂ ಕೆಲವು ಜನರು ಅನಿವಾರ್ಯ ಕಾರಣಗಳಿಂದ ಸಂಚರಿಸುತ್ತಿದ್ದರು. ಇದನ್ನು ತಪಾಸಣೆ ನಡೆಸುತ್ತಿದ್ದ ಸಂಚಾರಿ ಪೊಲೀಸರು, ವಾಹನಗಳನ್ನು ನಿಲ್ಲಿಸುವಂತೆ ಅಡ್ಡಗಟ್ಟುತ್ತಿದ್ದರು. ಯಾವ ಕಾರಣಕ್ಕಾಗಿ ಮತ್ತು ಎಲ್ಲಿಂದ ಎಲ್ಲಿಗೆ ಸಂಚರಿಸುತ್ತಿದ್ದೀರಿ ಎಂದು ಪ್ರಶ್ನಿಸುತ್ತಿದ್ದರು.
 
ಇದಾದ ನಂತರ ಪೊಲೀಸರು, ಸವಾರರನ್ನು ಬಿಟ್ಟು ಕಳುಹಿಸಬೇಕು. ಆದರೆ, ಸಂಬಂಧಪಟ್ಟ ವಾಹನವು ಈ ಹಿಂದೆ ಯಾವುದಾದರೂ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವ ಪ್ರಕರಣಗಳಿವೆಯೇ ಎಂದು ಪರಿಶೀಲಿಸುತ್ತಿದ್ದರು. ಒಂದು ವೇಳೆ ಯಾವುದಾದರೂ ಪ್ರಕರಣಗಳಲ್ಲಿ ದಂಡ ಪಾವತಿಸದೆ, ಬಾಕಿ ಉಳಿಸಿಕೊಂಡಿದ್ದರೆ, ಕೂಡಲೇ ದಂಡ ಪಾವತಿಸಿ ವಾಹನಗಳನ್ನು ಬಿಡಿಸಿಕೊಂಡು ಹೋಗುವಂತೆ ಸೂಚಿಸುತ್ತಿದ್ದರು. ದಂಡ ಪಾವತಿಸದಿದ್ದರೆ, ವಾಹನಗಳನ್ನು ಬಿಡಲು ಸತಾಸುತ್ತಿದ್ದರು ಎಂದು ಸವಾರರೊಬ್ಬರು ಆರೋಪ ಮಾಡಿದ್ದಾರೆ.
ರಾಜಾಜಿನಗರದಿಂದ ನೃಪತುಂಗ ರಸ್ತೆಯಲ್ಲಿರುವ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿದ್ದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments