Webdunia - Bharat's app for daily news and videos

Install App

ಐಟಿ ಕಂಪನಿಗಳಲ್ಲಿ 14 ಗಂಟೆ ದುಡಿತ: ಈ ಥರಾ ಕತ್ತೆ ದುಡಿತ ನ್ಯಾಯಾನಾ ಅಂತಿದ್ದಾರೆ ನೌಕರರು

Krishnaveni K
ಸೋಮವಾರ, 22 ಜುಲೈ 2024 (10:41 IST)
ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿದೇಯಕ ವಿವಾದದ ಬೆನ್ನಲ್ಲೇ  ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ 14 ಗಂಟೆಗಳಿಗೆ ಕೆಲಸದ ಅವಧಿ ಹೆಚ್ಚಿಸುವ ಪ್ರಸ್ತಾಪವಿಟ್ಟಿದೆ. ಇದೀಗ ಉದ್ಯೋಗಿಗಳ ಆಕ್ರೋಶಕ್ಕೆ ಗುರಿಯಾಗಿದೆ.

ಈಗಾಗಲೇ ಐಟಿ ಉದ್ಯೋಗಿಗಳಿಗೆ 10 ಗಂಟೆಗಳ ಕಾಲ ಉದ್ಯೋಗದ ಅವಧಿ ಇತ್ತು. ಆದರೆ ಈಗ 14 ಗಂಟೆಗಳಿಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಇಡಲಾಗಿದೆ. ಈಗ ವಾರಕ್ಕೆ ಮೂರು ಶಿಫ್ಟ್ ಗಳಿದ್ದು ಇನ್ನು ಎರಡು ಶಿಫ್ಟ್ ಗಳಿಗೆ ಇಳಿಕೆ ಮಾಡಿ 70 ಗಂಟೆ ದುಡಿಯಬೇಕಾಗಬಹುದು.

ಈಗಾಗಲೇ ಐಟಿ ಸಂಸ್ಥೆಗಳ ಮಾಲಿಕರು ಸಿಎಂಗೆ ಪ್ರಸಾವನೆ ಸಲ್ಲಿಸಿದ್ದಾರೆ. ಸಿಎಂ ಕೂಡಾ ಇದನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಸಿಎಂ ಒಪ್ಪಿಗೆ ಸೂಚಿಸಿದರೆ ಈ ನಿಯಮ ಜಾರಿಗೆ ಬರಲಿದೆ. ಆದರೆ ನೌಕರರು ಮಾತ್ರ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕೆಲಸದ ಒತ್ತಡದಿಂದಾಗಿ ನೌಕರರ ಆರೋಗ್ಯ ಹಾಳಾಗಿದೆ. ಇನ್ನೀಗ 14 ಗಂಟೆ ದುಡಿತ ಎಂದರೆ ಕತ್ತೆ ದುಡಿತವಾಗುತ್ತದೆ. ಇದು ನ್ಯಾಯಯುತವಲ್ಲ ಎಂಬ ಅಸಮಾಧಾನ ಕೇಳಿಬರುತ್ತಿದೆ.

ಇತ್ತೀಚೆಗೆ ಕರ್ನಾಟಕ ಸರ್ಕಾರ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಎಂಬ ನಿಯಮ ಜಾರಿಗೆ ತರಲು ಹೊರಟಿತ್ತು. ಅದಕ್ಕೆ ಪ್ರತೀಕಾರವಾಗಿ ಐಟಿ ಕಂಪನಿಗಳು ಉದ್ಯೋಗಿಗಳ ಮೇಲೆ ಹೆಚ್ಚುವರಿ ಕೆಲಸದ ಅವಧಿಯ ಹೊರೆ ಹಾಕಲು ಹೊರಟಿದ್ದಾರಾ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments