Webdunia - Bharat's app for daily news and videos

Install App

ಷೇರು ಮಾರುಕಟ್ಟೆ ಇಂದು ಹೇಗಿದೆ: ಹೂಡಿಕೆದಾರರಿಗೆ ಸಂಕ್ರಾಂತಿ ಗುಡ್ ನ್ಯೂಸ್

Krishnaveni K
ಮಂಗಳವಾರ, 14 ಜನವರಿ 2025 (12:36 IST)
ಮುಂಬೈ: ಕಳೆದ ಒಂದು ವಾರದಿಂದ ತೀವ್ರ ಕುಸಿತದಲ್ಲಿದ್ದ ಷೇರು ಮಾರುಕಟ್ಟೆ ಇಂದು ಕೊಂಚ ಚೇತರಿಕೆ ಕಂಡುಬಂದಿದ್ದು ಹೂಡಿಕೆದಾರರಲ್ಲಿ ಕೊಂಚ ನೆಮ್ಮದಿ ಮೂಡಿದೆ. ಇದು ಸಂಕ್ರಾಂತಿ ಗುಡ್ ನ್ಯೂಸ್ ಎಂದೇ ಹೇಳಬಹುದು.

ಷೇರು ಮಾರುಕಟ್ಟೆ ನಿನ್ನೆ ದಾಖಲೆಯ ಪ್ರಮಾಣಕ್ಕೆ ಕುಸಿತ ಕಂಡಿತ್ತು. ಇದರಿಂದ ಹೂಡಿಕೆದಾರರು ಭಾರೀ ನಷ್ಟ ಅನುಭವಿಸಿದ್ದರು. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿಯಿತ್ತು. ಹೀಗಾಗಿ ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡಿದ್ದವರು ಕಂಗಾಲಾಗಿದ್ದರು.

ಆದರೆ ಇಂದು ಸಂಕ್ರಾಂತಿ ದಿನವೇ ಕೊಂಚ ಚೇತರಿಕೆ ಕಂಡುಬಂದಿದೆ. ಇಂದು ಬೆಳಗಿನ ಅವಧಿಯಲ್ಲಿ ಸೆನ್ಸೆಕ್ಸ್ 436.46 ಪಾಯಿಂಟ್ ಗಳಷ್ಟು ಏರಿಕೆಯಲ್ಲಿದ್ದರೆ ನಿಫ್ಟಿ 50 149.60 ಪಾಯಿಂಟ್ ಗಳಷ್ಟು ಏರಿಕೆಯಲ್ಲಿದೆ. ನಿಫ್ಟಿ ಬ್ಯಾಂಕ್ 666.35 ಪಾಯಿಂಟ್, ನಿಫ್ಟಿ ಮಿಡ್ ಕ್ಯಾಪ್ 1,135.9 ಪಾಯಿಂಟ್ ಏರಿಕೆಯಲ್ಲಿದೆ.

ನಿನ್ನೆಗೆ ಹೋಲಿಸಿದರೆ ಇಂದು ಚೇತರಿಕೆಯತ್ತ ಸಾಗುತ್ತಿದೆ ಎಂದೇ ಹೇಳಬಹುದು. ಈ ಟ್ರೆಂಡ್ ಮುಂದುವರಿದು ಮುಂದಿನ ದಿನಗಳಲ್ಲಿ ಷೇರು ಮಾರುಕಟ್ಟೆ ಮತ್ತೆ ಮೊದಲಿನ ಸ್ಥಿತಿಗೆ ಬರಬಹುದು ಎಂಬ ವಿಶ್ವಾಸ ಹೂಡಿಕೆದಾರರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments