Webdunia - Bharat's app for daily news and videos

Install App

ಎಟಿಎಂಗೆ ಹಣ ಭರ್ತಿ ಮಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಗೃಹ ಸಚಿವಾಲಯ

Webdunia
ಸೋಮವಾರ, 20 ಆಗಸ್ಟ್ 2018 (14:05 IST)
ನವದೆಹಲಿ : ಎಟಿಎಂಗೆ ಹಣ ಭರ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಅಧಿಸೂಚನೆವೊಂದನ್ನು  ಹೊರಡಿಸಿದೆ.


ಅದರ ಪ್ರಕಾರ ನಗರ ಪ್ರದೇಶಗಳಲ್ಲಿ ರಾತ್ರಿ 9 ಗಂಟೆ ನಂತರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ 6 ಗಂಟೆಯ ನಂತರ ಎಟಿಎಂಗೆ ಹಣ ಭರ್ತಿ ಮಾಡುವಂತಿಲ್ಲ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮಧ್ಯಾಹ್ನ 4 ಗಂಟೆಯೊಳಗೆ ಎಟಿಎಂಗೆ ಹಣ ತುಂಬಬೇಕು. ಎಟಿಎಂ ಹಣ ನಿರ್ವಹಣೆ ಮಾಡುವ ಖಾಸಗಿ ಕಂಪನಿಗಳು ಮಧ್ಯಾಹ್ನದೊಳಗಾಗಿ ಬ್ಯಾಂಕ್ ನಿಂದ ಹಣ ಸಂಗ್ರಹಿಸಬೇಕು ಎಂದು ಸೂಚಿಸಿದೆ.


ಅಲ್ಲದೇ ಎಟಿಎಂ ಗೆ ಹಣ ತುಂಬುವ ವಾಹನದಲ್ಲಿ ಡ್ರೈವರ್ ಜೊತೆಗೆ ಇಬ್ಬರು ಪರಿಣಿತಿ ಹೊಂದಿರುವ ಬಂದೂಕುದಾರಿ ಭದ್ರತ ಸಿಬ್ಬಂದಿ ಹಾಗೂ ಇಬ್ಬರು ಎಟಿಎಂ ಗೆ ಹಣ ತುಂಬುವ ಅಧಿಕಾರಿಗಳನ್ನು ಕಳುಹಿಸಿಕೊಡುವಂತೆ ಹೇಳಿದೆ. ಇದಲ್ಲದೇ ಹಣ ಸಾಗಾಣೆ ಮಾಡುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅನ್ನು ಅಳವಡಿಕೆ ಮಾಡುವುದು ಕಡ್ಡವಾಗಿದ್ದು, ಐದುಕೋಟಿ ಗಿಂತ ಹೆಚ್ಚು ಮೊತ್ತದ ಹಣವನ್ನು ವಾಹನದಲ್ಲಿ ಸಾಗಾಣೆ ಮಾಡುವಂತಿಲ್ಲ ಎಂದು ತಿಳಿಸಿದೆ.


ಈ ಹೊಸ ಅಧಿಸೂಚನೆ ಫೆಬ್ರವರಿ 8, 2019ರಿಂದ ಜಾರಿಗೆ ಬರಲಿದ್ದು, ಕಟ್ಟು ನಿಟ್ಟಿನಲ್ಲಿ ಆದೇಶವನ್ನು ಜಾರಿಗೆ ತರುವಂತೆ ಕೇಂದ್ರ ಗೃಹ ಸಚಿವಾಲಯ ದೇಶದ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಹಾಗೂ ಹಣ ಸಾಗಾಣೆ ಮಾಡುವ ಸೆಕ್ಯೂರಿಟಿ ಕಚೇರಿಗಳಿಗೆ ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments