Webdunia - Bharat's app for daily news and videos

Install App

ಕುಸಿತದ ನಂತರ ಚೇತರಿಕೆ ಕಂಡ ಷೇರುಪೇಟೆ

Webdunia
ಮಂಗಳವಾರ, 23 ಆಗಸ್ಟ್ 2022 (19:50 IST)
ಉಕ್ರೇನ್​ ಮೇಲೆ ರಷ್ಯಾದ ದಾಳಿ ಮತ್ತಷ್ಟು ತೀವ್ರಗೊಳ್ಳುವ ಭೀತಿ, ತೈವಾನ್ ವಿವಾದ ಪಡೆದುಕೊಳ್ಳಬಹುದಾದ ತಿರುವಿನ ಬಗ್ಗೆ ಅಸ್ಪಷ್ಟತೆ, ಯೂರೋಪ್​ನಲ್ಲಿನ ಇಂಧನ ಬಿಕ್ಕಟ್ಟು, ತೈಲೋತ್ಪಾದನೆ ಕಡಿಮೆ ಮಾಡುವುದಾಗಿ ಒಪೆಕ್ ದೇಶಗಳ ಘೋಷಣೆ ಸೇರಿದಂತೆ ಹಲವು ಕಾರಣಗಳಿಂದ ಭಾರತದ ಷೇರುಪೇಟೆಯಲ್ಲಿ ನಿರುತ್ಸಾಹ ಮೂಡಿದೆ. ಇಂದು ಷೇರುಪೇಟೆಯು ಕುಸಿತದೊಂದಿಗೆ ವಹಿವಾಟು ಅರಂಭಿಸಿತು. ಇದು BSE ಮತ್ತು NSE ಸತತ 3ನೇ ದಿನವೂ ಕುಸಿತವಾಗಿದೆ. ಚೀನಾದಲ್ಲಿ ಆರ್ಥಿಕ ಹಿಂಜರಿತದ ಭೀತಿ ಎದುರಾಗಿದ್ದರೆ, ಏಷ್ಯಾದ ಆರು ಪ್ರಮುಖ ಷೇರುಪೇಟೆಗಳಲ್ಲಿ ಸತತ ಆರನೇ ದಿನ ಕುಸಿತ ಮುಂದುವರಿದಿದೆ. ಭಾರತದಲ್ಲಿ ಕುಸಿತದೊಂದಿಗೆ ವಹಿವಾಟು ಆರಂಭವಾದರೂ, ಸ್ವಲ್ಪ ಕಾಲದಲ್ಲಿಯೇ ಎರಡೂ ಸೂಚ್ಯಂಕಗಳು ಚೇತರಿಸಿಕೊಂಡವು. ಆರಂಭಿಕ ವಹಿವಾಟಿನಲ್ಲಿ ಬಿಎಸ್​ಐ ಸೆನ್ಸೆಕ್ಸ್ 361.86 ಅಂಶಗಳ ಕುಸಿತ ಕಂಡರೆ, ಎನ್​ಎಸ್​ಇ 114.70 ಅಂಶಗಳ ಕುಸಿತ ದಾಖಲಿಸಿತ್ತು. ನಿನ್ನೆ ವಹಿವಾಟು ಕೊನೆಗೊಂಡಿದ್ದಕ್ಕೆ ಹೋಲಿಸಿದರೆ ಬಿಎಸ್​ಇ  ಮುನ್ನಡೆ ದಾಖಲಿಸಿದವು. ಸೆನ್ಸೆಕ್ಸ್ ಮತ್ತೆ 60,000 ಅಂಶಗಳ ಸಮೀಪಕ್ಕೆ ಮುನ್ನುಗ್ಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments