Webdunia - Bharat's app for daily news and videos

Install App

ಸಾಲಗಾರರ ಕಾಟ ತಡೆಯಲಾಗದೆ ವರ್ಷದಲ್ಲಿ ಮೂರು ಮನೆ ಬದಲಿಸಿದ್ದ ಗುರುಪ್ರಸಾದ್‌

Sampriya
ಭಾನುವಾರ, 3 ನವೆಂಬರ್ 2024 (14:59 IST)
Photo Courtesy X
ಬೆಂಗಳೂರು: ಕಳೆದ ಒಂದು ವರ್ಷದಲ್ಲಿ ಮೂರು ಮನೆಯನ್ನು ಆತ್ಮಹತ್ಯೆಗೆ ಶರಣಾಗಿರುವ ನಿರ್ದೇಶಕ ಗುರುಪ್ರಸಾದ್ ಬದಲಾಯಿಸಿದ್ದರು. ಸಾಲಗಾರರ ಕಾಟ ತಡೆಯಲಾಗದೆ ಈ ರೀತಿ ಮಾಡುತ್ತಿದ್ದರೆ ಎಂಬ ಅನುಮಾನ ವ್ಯಕ್ತವಾಗಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಮಾದನಾಯಕನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗುರುಪ್ರಸಾದ್‌ ಅವರ ಶವ ಪತ್ತೆಯಾಗಿದೆ. ಗುರುಪ್ರಸಾದ್‌ ಸಿನಿಮಾ ವಿಚಾರವಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆ ಎಂಬ ಮಾತೂ ಹೇಳಿಬರುತ್ತಿದೆ.

ಬಸವೇಶ್ವರನಗರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಗುರುಪ್ರಸಾದ್ ನಂತರ ಜಯನಗರ ಕನಕನಪಾಳ್ಯದ ಅಶೋಕ್ ಪಿಲ್ಲರ್ ಬಳಿ ವಾಸವಿದ್ದರು. ಕೆಲ ದಿನಗಳ ಕಾಲ ಮನೆ ಬಿಟ್ಟು ಒಬ್ಬಂಟಿಯಾಗಿ ಹೋಟೆಲಿನಲ್ಲಿ ಗುರುಪ್ರಸಾದ್‌ ರೂಂ ಮಾಡಿಕೊಂಡಿದ್ದರು.

ಸದ್ಯ ಕಳೆದ ಕೆಲ ತಿಂಗಳುಗಳಿಂದ ಮಾದನಾಯಕನಹಳ್ಳಿ ಬಳಿಯ ನ್ಯೂ ಹೆವೆನ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಮಾದನಾಯಕನಹಳ್ಳಿ ಬಳಿಯ ಫ್ಲಾಟ್ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿಯನ್ನು ಗುರುಪ್ರಸಾದ್‌ ನೀಡಿರಲಿಲ್ಲ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಗುರುಪ್ರಸಾದ್‌ ಕೋರ್ಟ್‌, ಕಚೇರಿ ಅಲೆಯುತ್ತಿದ್ದರು. ಈ ನಡುವೆ ಜಯನಗರದಲ್ಲಿ ಪುಸ್ತಕ ಖರೀದಿ ಮಾಡಿ ಹಣ ನೀಡಿಲ್ಲ ಎಂಬ ಆರೋಪದ ಅಡಿ ಮತ್ತೊಂದು ಕೇಸ್ ದಾಖಲಾಗಿತ್ತು. ಹೀಗಾಗಿ ಆರ್ಥಿಕವಾಗಿ ಒಂದಷ್ಟು ಸಮಸ್ಯೆಯನ್ನು ಗುರುಪ್ರಸಾದ್ ಎದುರಿಸುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

ಮುಂದಿನ ಸುದ್ದಿ
Show comments